ಓದುಗರ ಪತ್ರ
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ ಹಿಂಪಡೆಯುವ ಯಾವುದೇ ರೀತಿಯ ಚಲನ್ಗಳು ಕನ್ನಡದಲ್ಲಿ ದೊರೆಯುವುದಿಲ್ಲ.
ಇದರಿಂದ ಇಂಗ್ಲಿಷ್ ಬಾರದವರು ಚಲನ್ ತುಂಬಲು ಅನ್ಯರನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಚಲನ್ನ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಮತ್ತೊಂದು ಭಾಗದಲ್ಲಿ ಹಿಂದಿಯಲ್ಲಿ ಮಾತ್ರ ಮುದ್ರಿತವಾಗಿರುತ್ತವೆ. ನೆರೆಯ ರಾಜ್ಯ ತಮಿಳುನಾಡಿನಲ್ಲಿ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಇನ್ನೊಂದು ಕಡೆ ತಮಿಳು ಭಾಷೆಯಲ್ಲಿ ಚಲನ್ ಮುದ್ರಣವಾಗಿರುತ್ತದೆ. ಆದರೆ ನಮ್ಮ ಕರ್ನಾಟಕದ ಅಂಚೆ ಕಚೇರಿಗಳಲ್ಲಿ ಕನ್ನಡದಲ್ಲಿ ಚಲನ್ ಮುದ್ರಣವಾಗದಿರುವ ಬಗ್ಗೆ ಸ್ಥಳೀಯ ಅಂಚೆ ಕಚೇರಿಗಳ ಸಿಬ್ಬಂದಿಯನ್ನು ಕೇಳಿದರೆ ನೀವು ನಮ್ಮ ಮೇಲಧಿಕಾರಿಗಳಿಗೆ ದೂರು ನೀಡಿ ಎನ್ನುತ್ತಾರೆ. ಮೇಲಧಿಕಾರಿಗಳಿಗೆ ಕೇಳಿದರೆ ಅವರು, ನೀವು ದೆಹಲಿಯಲ್ಲಿರುವ ಪ್ರಧಾನ ಕಚೇರಿಯನ್ನು ಕೇಳಿ ಎನ್ನುತ್ತಾರೆ. ರಾಜ್ಯದ ಎಲ್ಲ ಅಂಚೆ ಕಚೇರಿಗಳಲ್ಲೂ ಕನ್ನಡದಲ್ಲೂ ಚಲನ್ ಮುದ್ರಣವಾಗುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಗಮನ ಹರಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…