Andolana originals

ಓದುಗರ ಪತ್ರ: ಅಂಚೆ ಕಚೇರಿ ಅವ್ಯವಹಾರ: ಕೂಡಲೇ ಹಣ ಹಿಂದಿರುಗಿಸಿ

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಅಂಚೆ ಕಚೇರಿಯಲ್ಲಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಸೇರಿದಂತೆ ಅಲ್ಲಿನ ಸಿಬ್ಬಂದಿಗಳೇ ಷಾಮೀಲಾಗಿ ೭೫ ಮಂದಿ ಖಾತೆದಾರರ ಲಕ್ಷಾಂತರ ರೂ.ಗಳನ್ನು ದುರುಪಯೋಗ ಪಡಿಸಿಕೊಂಡಿದ್ದ ಪ್ರಕರಣ ಸುಮಾರು ೨-೩ ತಿಂಗಳ ಹಿಂದೆ ನಡೆದಿತ್ತು. ಆಗ ಇಲಾಖೆ ಅಧಿಕಾರಿಗಳು ಎಲ್ಲ ಖಾತೆದಾರರಿಗೂ ಇಲಾಖೆಯಿಂದಲೇ ಹಣ ಹಿಂದಿರುಗಿ ಸಲಾಗುವುದು ಎಂದು ಹೇಳಿದ್ದರು. ಆದರೆ ಇನ್ನೂ ಹಿಂದಿರುಗಿಸಿಲ್ಲ. ಇದೀಗ ಹಣ ಕಳೆದುಕೊಂಡವರು ಹಣ ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು, ಸಿಬ್ಬಂದಿಯನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ಅಂಚೆ ಕಚೇರಿಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗಿದೆ. ಇಲಾಖೆಯ ಉನ್ನತಾಧಿಕಾರಿಗಳು ಜನರ ಹಣವನ್ನು ಕೂಡಲೇ ಹಿಂದಿರುಗಿಸಿ, ಆಪಾದಿತ ನೌಕರರ ವೇತನದಿಂದ ಸದರಿ ಹಣವನ್ನು ವಸೂಲಿ ಮಾಡಿಕೊಳ್ಳುವ ಕೆಲಸವಾಗಲಿ. ಅಂಚೆ ಕಚೇರಿಗಳು ಜನರ ವಿಶ್ವಾಸ ಗಳಿಸಲು ಬಿಗಿ ಕ್ರಮ ಕೈಗೊಳ್ಳುವಂತಾಗಲಿ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago