ಓದುಗರ ಪತ್ರ
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಅಂಚೆ ಕಚೇರಿಯಲ್ಲಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಸೇರಿದಂತೆ ಅಲ್ಲಿನ ಸಿಬ್ಬಂದಿಗಳೇ ಷಾಮೀಲಾಗಿ ೭೫ ಮಂದಿ ಖಾತೆದಾರರ ಲಕ್ಷಾಂತರ ರೂ.ಗಳನ್ನು ದುರುಪಯೋಗ ಪಡಿಸಿಕೊಂಡಿದ್ದ ಪ್ರಕರಣ ಸುಮಾರು ೨-೩ ತಿಂಗಳ ಹಿಂದೆ ನಡೆದಿತ್ತು. ಆಗ ಇಲಾಖೆ ಅಧಿಕಾರಿಗಳು ಎಲ್ಲ ಖಾತೆದಾರರಿಗೂ ಇಲಾಖೆಯಿಂದಲೇ ಹಣ ಹಿಂದಿರುಗಿ ಸಲಾಗುವುದು ಎಂದು ಹೇಳಿದ್ದರು. ಆದರೆ ಇನ್ನೂ ಹಿಂದಿರುಗಿಸಿಲ್ಲ. ಇದೀಗ ಹಣ ಕಳೆದುಕೊಂಡವರು ಹಣ ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು, ಸಿಬ್ಬಂದಿಯನ್ನು ಅಮಾನತ್ತು ಮಾಡಲಾಗಿದೆ.
ಈ ಘಟನೆ ಅಂಚೆ ಕಚೇರಿಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗಿದೆ. ಇಲಾಖೆಯ ಉನ್ನತಾಧಿಕಾರಿಗಳು ಜನರ ಹಣವನ್ನು ಕೂಡಲೇ ಹಿಂದಿರುಗಿಸಿ, ಆಪಾದಿತ ನೌಕರರ ವೇತನದಿಂದ ಸದರಿ ಹಣವನ್ನು ವಸೂಲಿ ಮಾಡಿಕೊಳ್ಳುವ ಕೆಲಸವಾಗಲಿ. ಅಂಚೆ ಕಚೇರಿಗಳು ಜನರ ವಿಶ್ವಾಸ ಗಳಿಸಲು ಬಿಗಿ ಕ್ರಮ ಕೈಗೊಳ್ಳುವಂತಾಗಲಿ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…