Andolana originals

ಓದುಗರ ಪತ್ರ: ಅಂಚೆ ಕಚೇರಿಗಳಿಗೆ ‘ಮಾಲ್’ ಸ್ಪರ್ಶ ಬೇಡ

ಈಗಿರುವ ಅಂಚೆ ಕಚೇರಿಗಳ ವಿನ್ಯಾಸ ಬದಲಿಸಿ, ಅವುಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ, ನಾಗರಿಕರ ಅಗತ್ಯ ಬೇಡಿಕೆಗಳನ್ನು ಪೂರೈಸುವ ಉಡುಪು, ಔಷಧ ಆಹಾರ ಪದಾರ್ಥಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳೂ ಸೇರಿದಂತೆ ಗ್ರಾಹಕರು ಬಯಸುವ ಉತ್ಪನ್ನಗಳನ್ನು ಒದಗಿಸುವ ನಗರಗಳಲ್ಲಿರುವ ಬೃಹತ್ ಮಾಲ್‌ಗಳಂತೆ ಅಂಚೆ ಕಚೇರಿಗಳನ್ನು ಸಣ್ಣ ಮಾಲ್’ಗಳಾಗಿ ಪರಿವರ್ತಿಸಿ ಲಾಭದಾಯಕ ಸಂಸ್ಥೆಯನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆಯೊಂದನ್ನು ರೂಪಿಸುತ್ತಿದೆ ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಎಂ.ಸಿಂದಿಯಾ ಅವರು ಬೆಂಗಳೂರಿನಲ್ಲಿ ನಡೆದ ಅಂಚೆ ಇಲಾಖೆ ಸಮಾರಂಭದಲ್ಲಿ ಹೇಳಿದ್ದಾರೆ.

ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕೇಂದ್ರ ಸರ್ಕಾರಿ ಸ್ವಾಮ್ಯದ ಅಂಚೆ ಇಲಾಖೆಯೂ ಹಣಕಾಸಿನ ಸಮಸ್ಯೆ ಎದುರಿಸುತ್ತಿರಬಹುದು ಎನಿಸುತ್ತದೆ, ಖಾಸಗಿ ಕೊರಿಯರ್ ಸೇವೆಗಳು ಬಂದ ನಂತರ ಅಂಚೆ ಇಲಾಖೆಗೆ ದೊಡ್ಡ ಹೊಡೆತ ಬಿದ್ದಿರಬಹುದು. ಖಾಸಗಿ ಬಂಡವಾಳ ಶಾಹಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ಬಿಎಸ್‌ಎನ್‌ಎಲ್ ಇಂದು ಮುಚ್ಚುವ ಹಂತದಲ್ಲಿದೆ. ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಎಲ್ಲ ಇಲಾಖೆಗಳ ಕತ್ತು ಹಿಸುಕುವ ಕೆಲಸಮಾಡುತ್ತಿದೆ. ಸಂಪೂರ್ಣ ಖಾಸಗೀಕರಣ ಮಾಡುವ ಹುನ್ನಾರವಿದು. ಅಂಚೆ ಕಚೇರಿಗಳು ಈಗಿರುವಂತೆ ಅಂಚೆ ಕಚೇರಿಗಳಾಗಿಯೇ ಕಾರ್ಯ ನಿರ್ವಹಿಸಲಿ.

– ಬೂಕನಕೆರೆ ವಿಜೇಂದ್ರ , ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

24 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

37 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

49 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

1 hour ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 hour ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

3 hours ago