Andolana originals

ಓದುಗರ ಪತ್ರ: ಅಂಚೆ ಕಚೇರಿಗಳಿಗೆ ‘ಮಾಲ್’ ಸ್ಪರ್ಶ ಬೇಡ

ಈಗಿರುವ ಅಂಚೆ ಕಚೇರಿಗಳ ವಿನ್ಯಾಸ ಬದಲಿಸಿ, ಅವುಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ, ನಾಗರಿಕರ ಅಗತ್ಯ ಬೇಡಿಕೆಗಳನ್ನು ಪೂರೈಸುವ ಉಡುಪು, ಔಷಧ ಆಹಾರ ಪದಾರ್ಥಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳೂ ಸೇರಿದಂತೆ ಗ್ರಾಹಕರು ಬಯಸುವ ಉತ್ಪನ್ನಗಳನ್ನು ಒದಗಿಸುವ ನಗರಗಳಲ್ಲಿರುವ ಬೃಹತ್ ಮಾಲ್‌ಗಳಂತೆ ಅಂಚೆ ಕಚೇರಿಗಳನ್ನು ಸಣ್ಣ ಮಾಲ್’ಗಳಾಗಿ ಪರಿವರ್ತಿಸಿ ಲಾಭದಾಯಕ ಸಂಸ್ಥೆಯನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆಯೊಂದನ್ನು ರೂಪಿಸುತ್ತಿದೆ ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಎಂ.ಸಿಂದಿಯಾ ಅವರು ಬೆಂಗಳೂರಿನಲ್ಲಿ ನಡೆದ ಅಂಚೆ ಇಲಾಖೆ ಸಮಾರಂಭದಲ್ಲಿ ಹೇಳಿದ್ದಾರೆ.

ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕೇಂದ್ರ ಸರ್ಕಾರಿ ಸ್ವಾಮ್ಯದ ಅಂಚೆ ಇಲಾಖೆಯೂ ಹಣಕಾಸಿನ ಸಮಸ್ಯೆ ಎದುರಿಸುತ್ತಿರಬಹುದು ಎನಿಸುತ್ತದೆ, ಖಾಸಗಿ ಕೊರಿಯರ್ ಸೇವೆಗಳು ಬಂದ ನಂತರ ಅಂಚೆ ಇಲಾಖೆಗೆ ದೊಡ್ಡ ಹೊಡೆತ ಬಿದ್ದಿರಬಹುದು. ಖಾಸಗಿ ಬಂಡವಾಳ ಶಾಹಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ಬಿಎಸ್‌ಎನ್‌ಎಲ್ ಇಂದು ಮುಚ್ಚುವ ಹಂತದಲ್ಲಿದೆ. ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಎಲ್ಲ ಇಲಾಖೆಗಳ ಕತ್ತು ಹಿಸುಕುವ ಕೆಲಸಮಾಡುತ್ತಿದೆ. ಸಂಪೂರ್ಣ ಖಾಸಗೀಕರಣ ಮಾಡುವ ಹುನ್ನಾರವಿದು. ಅಂಚೆ ಕಚೇರಿಗಳು ಈಗಿರುವಂತೆ ಅಂಚೆ ಕಚೇರಿಗಳಾಗಿಯೇ ಕಾರ್ಯ ನಿರ್ವಹಿಸಲಿ.

– ಬೂಕನಕೆರೆ ವಿಜೇಂದ್ರ , ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ…

7 mins ago

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಲಿದೆಯೇ ಈ ಅವಧಿಯ ಮೊದಲ ಬಂಡಾಯ?

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ  ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

18 mins ago

ತಮಿಳುನಾಡಿನಲ್ಲಿ ಕಮಾಲ್‌ ಮಾಡಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…

31 mins ago

ಸಂಜೀವಿನಿ ಒಕ್ಕೂಟದಿಂದ ಜೇನು ಉತ್ಪಾದನೆ

ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…

37 mins ago

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

1 hour ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

1 hour ago