Andolana originals

ಓದುಗರ ಪತ್ರ: ಅಂಚೆ ಕಚೇರಿಗಳಿಗೆ ‘ಮಾಲ್’ ಸ್ಪರ್ಶ ಬೇಡ

ಈಗಿರುವ ಅಂಚೆ ಕಚೇರಿಗಳ ವಿನ್ಯಾಸ ಬದಲಿಸಿ, ಅವುಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ, ನಾಗರಿಕರ ಅಗತ್ಯ ಬೇಡಿಕೆಗಳನ್ನು ಪೂರೈಸುವ ಉಡುಪು, ಔಷಧ ಆಹಾರ ಪದಾರ್ಥಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳೂ ಸೇರಿದಂತೆ ಗ್ರಾಹಕರು ಬಯಸುವ ಉತ್ಪನ್ನಗಳನ್ನು ಒದಗಿಸುವ ನಗರಗಳಲ್ಲಿರುವ ಬೃಹತ್ ಮಾಲ್‌ಗಳಂತೆ ಅಂಚೆ ಕಚೇರಿಗಳನ್ನು ಸಣ್ಣ ಮಾಲ್’ಗಳಾಗಿ ಪರಿವರ್ತಿಸಿ ಲಾಭದಾಯಕ ಸಂಸ್ಥೆಯನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆಯೊಂದನ್ನು ರೂಪಿಸುತ್ತಿದೆ ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಎಂ.ಸಿಂದಿಯಾ ಅವರು ಬೆಂಗಳೂರಿನಲ್ಲಿ ನಡೆದ ಅಂಚೆ ಇಲಾಖೆ ಸಮಾರಂಭದಲ್ಲಿ ಹೇಳಿದ್ದಾರೆ.

ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕೇಂದ್ರ ಸರ್ಕಾರಿ ಸ್ವಾಮ್ಯದ ಅಂಚೆ ಇಲಾಖೆಯೂ ಹಣಕಾಸಿನ ಸಮಸ್ಯೆ ಎದುರಿಸುತ್ತಿರಬಹುದು ಎನಿಸುತ್ತದೆ, ಖಾಸಗಿ ಕೊರಿಯರ್ ಸೇವೆಗಳು ಬಂದ ನಂತರ ಅಂಚೆ ಇಲಾಖೆಗೆ ದೊಡ್ಡ ಹೊಡೆತ ಬಿದ್ದಿರಬಹುದು. ಖಾಸಗಿ ಬಂಡವಾಳ ಶಾಹಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ಬಿಎಸ್‌ಎನ್‌ಎಲ್ ಇಂದು ಮುಚ್ಚುವ ಹಂತದಲ್ಲಿದೆ. ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಎಲ್ಲ ಇಲಾಖೆಗಳ ಕತ್ತು ಹಿಸುಕುವ ಕೆಲಸಮಾಡುತ್ತಿದೆ. ಸಂಪೂರ್ಣ ಖಾಸಗೀಕರಣ ಮಾಡುವ ಹುನ್ನಾರವಿದು. ಅಂಚೆ ಕಚೇರಿಗಳು ಈಗಿರುವಂತೆ ಅಂಚೆ ಕಚೇರಿಗಳಾಗಿಯೇ ಕಾರ್ಯ ನಿರ್ವಹಿಸಲಿ.

– ಬೂಕನಕೆರೆ ವಿಜೇಂದ್ರ , ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 mins ago

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

24 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

24 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

24 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

24 hours ago