Andolana originals

ಓದುಗರ ಪತ್ರ: ಮರಣೋತ್ತರ ಪ್ರಶಸ್ತಿಗಳು ಕೃತಜ್ಞತೆಯ ಸಂಕೇತ

ದೇಶದ ಹಾಗೂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಸಾಧನೆ ಮಾಡಿರುವ ಗಣ್ಯರಿಗೆ ನೀಡುವುದು ಸಂಪ್ರದಾಯ. ಈ ಗೌರವಗಳನ್ನು ಕೆಲವರಿಗೆ ಜೀವಿತಾವಧಿಯಲ್ಲಿ ನೀಡಿದರೆ, ಮತ್ತೆ ಕೆಲವರಿಗೆ ಮರಣೋತ್ತರ ವಾಗಿ ನೀಡಲಾಗುತ್ತದೆ. ಹಿರಿಯ ನಟ ಡಾ. ವಿಷ್ಣುವರ್ಧನ್ ಮತ್ತು ಅಭಿನಯ ಶಾರದೆ ಎನಿಸಿದ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಮರಣೋತ್ತರವಾಗಿ ಪ್ರಶಸ್ತಿ ನೀಡಿದರೆ ಅದರ ಪ್ರಯೋಜನವೇನು? ಎಂಬ ಪ್ರಶ್ನೆ ಹಲವರಲ್ಲಿದೆ. ಪ್ರಶಸ್ತಿ ಎಂದರೆ ಅದು ಕೇವಲ ಒಂದು ಗೌರವದ ಪದಕ ಅಥವಾ ಪ್ರಮಾಣ ಪತ್ರವಲ್ಲ. ವ್ಯಕ್ತಿಯ ಸಾಧನೆಯನ್ನು ರಾಷ್ಟ್ರ ಅಥವಾ ರಾಜ್ಯವು ಗುರುತಿಸಿದ ಅಧಿಕೃತ ಮುದ್ರೆಯಾಗಿದೆ. ಬದುಕಿರುವಾಗ ಪ್ರಶಸ್ತಿ ಸ್ವೀಕರಿಸುವುದು ಸಂತೋಷದ ವಿಷಯ. ಆದರೆ, ಮರಣೋತ್ತರವಾಗಿ ನೀಡುವ ಪ್ರಶಸ್ತಿಯು ಆ ವ್ಯಕ್ತಿಯು ದೇಶಕ್ಕೆ ಅಥವಾ ರಾಜ್ಯಕ್ಕೆ ಸಲ್ಲಿಸಿದ ಅಸಾಧಾರಣ ಸೇವೆಗಳಿಗೆ ಕೃತಜ್ಞತೆಯ ಸಂಕೇತವಾಗಿದೆ.

ಆ ವ್ಯಕ್ತಿ ಇಲ್ಲದಿದ್ದರೂ, ಅವರ ಗೌರವ ಮತ್ತು ನೆನಪು ಶಾಶ್ವತವಾಗಿ ಉಳಿಯುತ್ತದೆ. ಮರಣೋತ್ತರವಾಗಿ ನೀಡಿದ ಪ್ರಶಸ್ತಿಗಳು ಮುಂದಿನ ಪೀಳಿಗೆಗೆ ಸೂರ್ತಿಯಾಗುತ್ತವೆ.

 -ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago