Andolana originals

ಓದುಗರ ಪತ್ರ: ಅಧಿಕಾರ ಶಾಶ್ವತ ಅಲ್ಲ, ರಾಜಕಾರಣಿಗಳು ಅರ್ಥೈಸಿಕೊಳ್ಳಲಿ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಒಂದು ವೇಳೆ ಸರ್ಕಾರ ನಡೆಸುವ ಪಕ್ಷ ಬದಲಾದರೆ, ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸಬಹುದು. ಜನರ ಆರ್ಥಿಕ ಸ್ಥಿತಿ ಬಲಗೊಳಿಸುವ ನಿಟ್ಟಿನಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು ಸರ್ಕಾರದ ಮೂಲ ಉದ್ದೇಶ. ಜನರ ಆರ್ಥಿಕ ಸ್ಥಿತಿ ಸುಧಾರಿಸಿದ ನಂತರ ಯೋಜನೆಗಳನ್ನು ನಿಲ್ಲಿಸ ಬಹುದು. ಹಿಂದಿನ ಸರ್ಕಾರಗಳು ಘೋಷಿಸಿದ್ದ ಕಲ್ಯಾಣ ಕಾರ್ಯಕ್ರಮ ಗಳು ಗೊತ್ತು ಗುರಿ ಇಲ್ಲದೆ ರದ್ದುಗೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಅಧಿಕಾರ ಶಾಶ್ವತ ಅಲ್ಲ ಎಂಬು ದನ್ನು ರಾಜಕಾರಣಿಗಳು ಮನವರಿಕೆ ಮಾಡಿಕೊಳ್ಳ ಬೇಕು. ಅಧಿಕಾರದಲ್ಲಿ ಇದ್ದಷ್ಟು ದಿನ ಜನರಿಗೆ ಉತ್ತಮ ಸೇವೆ ನೀಡಬೇಕು. ಆಡಳಿತ ಉತ್ತಮವಾಗಿದ್ದರೆ ಜನರು ಮರು ಆಯ್ಕೆ ಮಾಡುತ್ತಾರೆ. ದೇಶದ ಕೆಲವು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಗಳಿಗೆ ಪೂರ್ಣ ಪ್ರಮಾಣದ ಬಹುಮತವಿಲ್ಲ.

ಮಿತ್ರ ಪಕ್ಷಗಳ ಬೆಂಬಲ ದಿಂದ ಅಧಿಕಾರ ನಡೆಸುತ್ತಿವೆ. ಆಳುವ ಸರ್ಕಾರಗಳು ಜನ ವಿರೋಽ ನಿರ್ಧಾರಗಳನ್ನು ತೆಗೆದುಕೊಂಡರೆ ಜನರೇ ಅವರಿಗೆ ತಕ್ಕ ಶಾಸಿ ಮಾಡುತ್ತಾರೆ.

 – ವೀರೇಶ ಧೂಪದಮಠ,ಮೈಸೂರು.

 

 

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

4 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

5 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

5 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

5 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

6 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

15 hours ago