Andolana originals

ಡೆಂಗ್ಯು ಬಗ್ಗೆ ಜಾಗೃತಿ, ಮುನ್ನೆಚ್ಚರಿಕೆ ಅಗತ್ಯ

ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಪೈಕಿ ಈಡಿಸ್ ಈಜಿಪ್ಟ ಎಂಬ ಸೊಳ್ಳೆ ಕಚ್ಚಿದರೆ ಈ ಡೆಂಗ್ಯು ಸೋಂಕು ಹರಡುವ ಸಾಧ್ಯತೆಗಳಿರುತ್ತವೆ. ಡೆಂಗ್ಯು ಕಾಣಿಸಿಕೊಂಡವರಲ್ಲಿ ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಳ್ಳುವುದು, ಕೈಕಾಲುಗಳಲ್ಲಿ ಸೆಳೆತ, ನೋವು, ಆಯಾಸದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡಾಗ ನಾವು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಪ್ರಮುಖವಾಗಿ ಜನನಿಬಿಡ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣವಾಗಬೇಕು. ಪ್ರತಿಮನೆಯಲ್ಲಿ ಸೊಳ್ಳೆ ಪರದೆ ಬಳಸುವ ಜತೆಗೆ, ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಆರೋಗ್ಯ ಇಲಾಖೆಯೂ ಈ ಬಗ್ಗೆ ಎಚ್ಚರವಹಿಸಿ ಡೆಂಗ್ಯು ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

andolana

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

10 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

10 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

10 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

10 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

10 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

10 hours ago