Andolana originals

ಡೆಂಗ್ಯು ಬಗ್ಗೆ ಜಾಗೃತಿ, ಮುನ್ನೆಚ್ಚರಿಕೆ ಅಗತ್ಯ

ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಪೈಕಿ ಈಡಿಸ್ ಈಜಿಪ್ಟ ಎಂಬ ಸೊಳ್ಳೆ ಕಚ್ಚಿದರೆ ಈ ಡೆಂಗ್ಯು ಸೋಂಕು ಹರಡುವ ಸಾಧ್ಯತೆಗಳಿರುತ್ತವೆ. ಡೆಂಗ್ಯು ಕಾಣಿಸಿಕೊಂಡವರಲ್ಲಿ ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಳ್ಳುವುದು, ಕೈಕಾಲುಗಳಲ್ಲಿ ಸೆಳೆತ, ನೋವು, ಆಯಾಸದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡಾಗ ನಾವು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಪ್ರಮುಖವಾಗಿ ಜನನಿಬಿಡ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣವಾಗಬೇಕು. ಪ್ರತಿಮನೆಯಲ್ಲಿ ಸೊಳ್ಳೆ ಪರದೆ ಬಳಸುವ ಜತೆಗೆ, ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಆರೋಗ್ಯ ಇಲಾಖೆಯೂ ಈ ಬಗ್ಗೆ ಎಚ್ಚರವಹಿಸಿ ಡೆಂಗ್ಯು ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

andolana

Recent Posts

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

3 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

3 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

4 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

4 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

4 hours ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

5 hours ago