ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಪೈಕಿ ಈಡಿಸ್ ಈಜಿಪ್ಟ ಎಂಬ ಸೊಳ್ಳೆ ಕಚ್ಚಿದರೆ ಈ ಡೆಂಗ್ಯು ಸೋಂಕು ಹರಡುವ ಸಾಧ್ಯತೆಗಳಿರುತ್ತವೆ. ಡೆಂಗ್ಯು ಕಾಣಿಸಿಕೊಂಡವರಲ್ಲಿ ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಳ್ಳುವುದು, ಕೈಕಾಲುಗಳಲ್ಲಿ ಸೆಳೆತ, ನೋವು, ಆಯಾಸದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡಾಗ ನಾವು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಪ್ರಮುಖವಾಗಿ ಜನನಿಬಿಡ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣವಾಗಬೇಕು. ಪ್ರತಿಮನೆಯಲ್ಲಿ ಸೊಳ್ಳೆ ಪರದೆ ಬಳಸುವ ಜತೆಗೆ, ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಆರೋಗ್ಯ ಇಲಾಖೆಯೂ ಈ ಬಗ್ಗೆ ಎಚ್ಚರವಹಿಸಿ ಡೆಂಗ್ಯು ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…