ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಪೈಕಿ ಈಡಿಸ್ ಈಜಿಪ್ಟ ಎಂಬ ಸೊಳ್ಳೆ ಕಚ್ಚಿದರೆ ಈ ಡೆಂಗ್ಯು ಸೋಂಕು ಹರಡುವ ಸಾಧ್ಯತೆಗಳಿರುತ್ತವೆ. ಡೆಂಗ್ಯು ಕಾಣಿಸಿಕೊಂಡವರಲ್ಲಿ ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಳ್ಳುವುದು, ಕೈಕಾಲುಗಳಲ್ಲಿ ಸೆಳೆತ, ನೋವು, ಆಯಾಸದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡಾಗ ನಾವು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಪ್ರಮುಖವಾಗಿ ಜನನಿಬಿಡ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣವಾಗಬೇಕು. ಪ್ರತಿಮನೆಯಲ್ಲಿ ಸೊಳ್ಳೆ ಪರದೆ ಬಳಸುವ ಜತೆಗೆ, ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಆರೋಗ್ಯ ಇಲಾಖೆಯೂ ಈ ಬಗ್ಗೆ ಎಚ್ಚರವಹಿಸಿ ಡೆಂಗ್ಯು ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…