ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಪೈಕಿ ಈಡಿಸ್ ಈಜಿಪ್ಟ ಎಂಬ ಸೊಳ್ಳೆ ಕಚ್ಚಿದರೆ ಈ ಡೆಂಗ್ಯು ಸೋಂಕು ಹರಡುವ ಸಾಧ್ಯತೆಗಳಿರುತ್ತವೆ. ಡೆಂಗ್ಯು ಕಾಣಿಸಿಕೊಂಡವರಲ್ಲಿ ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಳ್ಳುವುದು, ಕೈಕಾಲುಗಳಲ್ಲಿ ಸೆಳೆತ, ನೋವು, ಆಯಾಸದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡಾಗ ನಾವು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಪ್ರಮುಖವಾಗಿ ಜನನಿಬಿಡ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣವಾಗಬೇಕು. ಪ್ರತಿಮನೆಯಲ್ಲಿ ಸೊಳ್ಳೆ ಪರದೆ ಬಳಸುವ ಜತೆಗೆ, ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಆರೋಗ್ಯ ಇಲಾಖೆಯೂ ಈ ಬಗ್ಗೆ ಎಚ್ಚರವಹಿಸಿ ಡೆಂಗ್ಯು ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…