ಓದುಗರ ಪತ್ರ
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು ಹಾಕಿರುವುದು ಶ್ಲಾಘನೀಯ.
ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ ರಾಜ್ಯ ಹಾಗೂ ವಿದೇಶಿಗರಿಗೆ ಇಲ್ಲಿ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಇಲ್ಲಿಗೆ ಬರುವ ಸ್ಥಳೀಯ ಗ್ರಾಹಕರು ಅನ್ಯಭಾಷಿಗರೊಂದಿಗೆ ಏನು ಮಾತಾಡಬೇಕು, ಏನನ್ನು ಕೇಳಿ ಪಡೆದುಕೊಳ್ಳಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ.
ಜೊತೆಗೆ ತಮಗಿಷ್ಟವಾದ ತಿಂಡಿ ತಿನಿಸುಗಳನ್ನು ತೆಗೆದುಕೊಳ್ಳಲು ಇಂತಹ ಅಂಗಡಿ ಮುಂಗಟ್ಟುಗಳಲ್ಲಿ ಗ್ರಾಹಕರು ಪರಕೀಯರಂತೆ ಹರಸಾಹಸ ಪಡುವಂತಾಗಿದೆ. ಹೊರ ರಾಜ್ಯ ಹಾಗೂ ವಿದೇಶಿಗರು ಸಕ್ರಿಯವಾಗಿ ಕೆಲಸ ಮಾಡುತ್ತಾರೆ ಎಂದು ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿರಬಹುದು. ಆದರೆ ಅವರಿಗೆ ಭಾಷಾ ಜ್ಞಾನದ ಕೊರತೆಯಿಂದ ಗ್ರಾಹಕರಿಗೆ ತೊಡಕುಂಟಾಗುತ್ತದೆ. ಹಾಗಾಗಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡಿಗರಿಗೂ ಹೆಚ್ಚು ಅವಕಾಶ ಕೊಡಬೇಕಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…