ಮೈಸೂರಿನ ರೈಲು ನಿಲ್ದಾಣದಲ್ಲಿ ಸೇವೆ ನೀಡುವ ಆಟೋ ಚಾಲಕರು ಪ್ರಯಾಣಿಕರಿಂದ ರಾತ್ರಿ ೧೦ ಗಂಟೆಯ ನಂತರ ಕನಿಷ್ಠ ಪ್ರಯಾಣದರವನ್ನು ೨೫೦-೩೦೦ ರೂ. ಪಡೆಯುತ್ತಿದ್ದಾರೆ ಹಾಗೂ ದೂರವಿದ್ದಲ್ಲಿ ೫೦೦-೬೦೦ ರೂ.ವರೆಗೂ ಸುಲಿಗೆ ಮಾಡುತ್ತಿದ್ದಾರೆ. ಪ್ರಿ ಪೇಯ್ಡ್ಆಟೋ ಚಾಲಕರು ಪ್ರಯಾಣಿ ಕರನ್ನು ಆಟೋದಲ್ಲಿ ಹತ್ತಿಸಿಕೊಂಡು ನಿಗದಿತ ಸ್ಥಳಕ್ಕೆ ತಲುಪಿದ ಮೇಲೆ ಚೀಟಿಯಲ್ಲಿರುವ ಹಣಕ್ಕಿಂತ ೩೦ ರಿಂದ ೫೦ ರೂ. ಹೆಚ್ಚು ಹಣಕ್ಕಾಗಿ ಪೀಡಿಸುವುದು ಸರಿಯಲ್ಲ. ಮತ್ತೊಂದು ಕಡೆ ಓಲಾ, ಊಬರ್ ಮೊದಲಾದ ಆಪ್ ಆಧಾರಿತ ಆಟೋ ಚಾಲಕರು ರಾತ್ರಿ ೯ ಗಂಟೆಯ ನಂತರ ಎಷ್ಟೇ ಸಲ ಬುಕಿಂಗ್ ಮಾಡಿದರೂ ರೈಲು ನಿಲ್ದಾಣದತ್ತ ಮುಖ ಮಾಡದಿರುವುದರಿಂದ ರಾತ್ರಿ ವೇಳೆ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರು ತಮ್ಮ ಮನೆಯನ್ನು ತಲುಪಲು ಪರದಾಡುವಂತಾಗಿದೆ.
ಪೊಲೀಸರು ಹಾಗೂ ರೈಲ್ವೆ ಇಲಾಖೆಯವರು ರೈಲು ನಿಲ್ದಾಣದ ಬಳಿ ಪ್ರಯಾಣಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಆಟೋ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜನರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಆರ್. ಯಶಸ್, ಮೈಸೂರು
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ…
ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…