ಓದುಗರ ಪತ್ರ
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ ಕೆರೆ ವಿಭಜನೆಯಾಗಿದ್ದು, ಎರಡೂ ಬದಿಗಳಲ್ಲಿರುವ ಕೆರೆಯ ಗಡಿಯನ್ನು ಗುರುತಿಸಿ, ಕಬ್ಬಿಣದ ಬೇಲಿಯನ್ನು ಹಾಕಲಾಗಿತ್ತು. ಕೇರ್ಗಳ್ಳಿ ಪಂಚಾಯಿತಿಯಿಂದ ಪ್ರತಿದಿನವೂ ತ್ಯಾಜ್ಯವನ್ನು ತೆರವುಗೊಳಿಸಲಾಗುತ್ತಿದೆ.
ಚಾಮುಂಡೇಶ್ವರಿ ವಿದ್ಯುತ್ ನಿಗಮದಿಂದ ಭೂಗತ ಕೇಬಲ್ ಅಳವಡಿಕೆಯ ಸಮಯದಲ್ಲಿ ಬೇಲಿಯನ್ನು ತುಂಡರಿಸಿರುವ ಪರಿಣಾಮ ಕೆರೆಯ ಅಂಗಳವನ್ನು ಪ್ರವೇಶಿಸುವುದು ಸುಲಭವಾಗಿ, ತ್ಯಾಜ್ಯವನ್ನು ಸುರಿಯುತ್ತಿದ್ದಾರೆ. ಸಂಬಂಧಪಟ್ಟವರು ಕೂಡಲೇ ಈ ಮೊದಲಿನಂತೆ ಕೆರೆಗೆ ಕಬ್ಬಿಣದ ಬೇಲಿಯನ್ನು ನಿರ್ಮಿಸಿ ಕೆರೆಗೆ ತ್ಯಾಜ್ಯವನ್ನು ಸುರಿಯುವುದನ್ನು ತಡೆಗಟ್ಟಬೇಕು ಹಾಗೂ ಕೆರೆಗೆ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
-ವೈ.ಕಾಶಿ, ಕನಕದಾಸನಗರ, ಮೈಸೂರು
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…