ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು ಬಳಸಿ ಅಲ್ಪಾವಧಿಯಲ್ಲಿ ಹಣ ದುಪ್ಪಟ್ಟು ಮಾಡುವ ಆಮಿಷವೊಡ್ಡಿ ಆರಂಭದಲ್ಲಿ ನಂಬಿಕೆ ಗಳಿಸಿ ನಂತರ ಕೋಟ್ಯಂತರ ರೂಪಾಯಿಗಳೊಂದಿಗೆ ನಾಪತ್ತೆಯಾಗುತ್ತಿದ್ದಾರೆ. ಇತ್ತೀಚಿನ ಐಸಿಐಸಿಐ ಬ್ಯಾಂಕ್ ಹಗರಣದಲ್ಲಿ ಕಂಡುಬಂದಂತೆ ಅಸಲಿ ಚಿನ್ನದ ಬದಲಿಗೆ ನಕಲಿ ಚಿನ್ನದ ಪ್ಯಾಕೆಟ್ಗಳನ್ನು ಅಡವಿಟ್ಟು ರೂ.೨೩ ಕೋಟಿ ಸಾಲ ಪಡೆಯುವಂತಹ ಲೋನ್ ವಂಚನೆ ಜಾಲಗಳು ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಅಲುಗಾಡಿಸುತ್ತಿವೆ. ಇದಲ್ಲದೆ ಅಸ್ತಿತ್ವದಲ್ಲಿಲ್ಲದ ಚಿನ್ನದ ಗಣಿಗಳಲ್ಲಿ ಹೂಡಿಕೆ ಅಥವಾ ಸುರಕ್ಷಿತ ಲಾಕರ್ನಲ್ಲಿ ಚಿನ್ನ ಇಟ್ಟಿರುವುದಾಗಿ ನಂಬಿಸುವ ಡಿಜಿಟಲ್ ಗೋಲ್ಡ್ ವಂಚನೆಗಳು ಹೆಚ್ಚಾಗುತ್ತಿವೆ. ಮಾರುಕಟ್ಟೆಯಲ್ಲಿ ಕೃತಕವಾಗಿ ಷೇರು ಬೆಲೆ ಏರಿಸಿ ಹೂಡಿಕೆದಾರರನ್ನು ಸೆಳೆಯುವ ಪಂಪ್ ಅಂಡ್ ಡಂಪ್ ತಂತ್ರಗಳು ಮತ್ತು ನಕಲಿ ಸಾಲದ ಏಜೆಂಟರು ದಾಖಲೆಗಳ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿರುವುದು ಸಾಮಾನ್ಯವಾಗಿದೆ. ಈ ವಂಚಕ ಕಂಪೆನಿಗಳ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿರುವುದರಿಂದ ಸಂತ್ರಸ್ತರು ತಮ್ಮ ಕಳೆದುಹೋದ ಹಣವನ್ನು ಮರಳಿ ಪಡೆಯಲು ಸಾಧ್ಯವಾಗದೆ ವರ್ಷಗಟ್ಟಲೆ ನ್ಯಾಯಾಲಯಗಳಿಗೆ ಅಲೆಯುತ್ತಿದ್ದಾರೆ. ಸರ್ಕಾರ ಇಂತಹ ವ್ಯವಸ್ಥಿತ ಮೋಸದ ಜಾಲವನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…