ಓದುಗರ ಪತ್ರ
ಇಂದಿನ ತಂತ್ರಜ್ಞಾನ ಯುಗದಲ್ಲಿ ಬ್ಯಾಂಕಿಂಗ್, ವ್ಯಾಪಾರ, ಶಿಕ್ಷಣ ಎಲ್ಲವೂ ಡಿಜಿಟಲ್ ಆಗುತ್ತಿವೆ. ಈ ಅಭಿವೃದ್ಧಿಯ ಜತೆಗೆ ‘ ಸೋಶಿಯಲ್ ಎಂಜಿನಿಯರಿಂಗ್’ ಎಂಬ ಹೊಸ ರೀತಿಯ ಆನ್ಲೆ ನ್ ಮೋಸಗಳು ಅಪಾಯಕಾರಿಯಾಗಿ ಬೆಳೆಯುತ್ತಿವೆ. ಜನರ ವಿಶ್ವಾಸ, ಭಾವನೆ ಮತ್ತು ಅಗತ್ಯತೆಗಳನ್ನು ಬಂಡವಾಳ ಮಾಡಿಕೊಂಡು ಬ್ಯಾಂಕ್ ಸಿಬ್ಬಂದಿ ಅಥವಾ ಸರ್ಕಾರಿ ನೌಕರರಂತೆ ನಟಿಸಿ ಹಣ ಹಾಗೂ ವೈಯಕ್ತಿಕ ಮಾಹಿತಿಯನ್ನು ಕಸಿದುಕೊಳ್ಳುತ್ತಿದ್ದಾರೆ.
ಇದು ಕೇವಲ ತಾಂತ್ರಿಕ ಸಮಸ್ಯೆಯಲ್ಲ. ಮಾನವ ಮನಸ್ಸಿನ ಭದ್ರತೆಯ ಪರೀಕ್ಷೆ. ಶಿಕ್ಷಣ ಪಡೆದವರೂ ಈ ಬಲೆಗೆ ಬೀಳುತ್ತಿರುವುದು ಆತಂಕಕಾರಿ. ಹೀಗಾಗಿ ತಾಂತ್ರಿಕ ಭದ್ರತೆಯಷ್ಟೇ ಅಲ್ಲ, ಜಾಗೃತಿಯೇ ನಿಜವಾದ ರಕ್ಷಣೆಯಾಗಿದೆ. ಸರ್ಕಾರವು ಶಾಲೆ-ಕಾಲೇಜುಗಳಲ್ಲಿ ‘ಡಿಜಿಟಲ್ ಸುರಕ್ಷತೆ’ ಕುರಿತ ಪಾಠವನ್ನು ಅಳವಡಿಸಬೇಕು, ಸೈಬರ್ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಬೇಕು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳು ಹೊಸ ಮೋಸದ ವಿಧಾನಗಳ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಬೇಕು. ಜೊತೆಗೆ ಜನರಿಗೆ ನಕಲಿ ಕರೆಗಳು, ಇ -ಮೇಲ್ಗಳು ಮತ್ತು ಸಂದೇಶಗಳನ್ನು ಗುರುತಿಸುವ ತರಬೇತಿಯನ್ನು ನೀಡುವ ಕಾರ್ಯಕ್ರಮಗಳನ್ನು ಕೂಡ ಪ್ರಾರಂಭಿಸಬೇಕು.
-ಡಾ. ಎಚ್. ಕೆ.ವಿಜಯಕುಮಾರ್, ಬೆಂಗಳೂರು
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…