ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ ಜಲ ಮೂಲವಾಗಿದೆ. ಲಕ್ಷ್ಮಣತೀರ್ಥ ನದಿಯ ನೀರನ್ನು ಕೃಷಿ,ಕುಡಿಯುವ ನೀರು ಮತ್ತು ದೈನಂದಿನ ಬಳಕೆಗಾಗಿ ಜನರು ಅವಲಂಬಿಸಿದ್ದಾರೆ. ಆದರೆ ೮-೯ ವರ್ಷಗಳಿಂದ ನಗರದ ಕೆಲವು ಭಾಗಗಳಲ್ಲಿ ಪ್ಲಾಸ್ಟಿಕ್ ಕಸ ಮತ್ತು ಮಲಿನ ನೀರನ್ನು ನದಿಗೆ ಬಿಡುತ್ತಿರುವುದರಿಂದ ನದಿಯ ನೀರು ಕಲುಷಿತವಾಗಿದೆ. ಇದರಿಂದ ಕುಡಿಯುವ ನೀರಿನ ಗುಣಮಟ್ಟ ಹಾಳಾಗುತ್ತಿದೆ; ಜನರ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ.ಈ ಪರಿಸ್ಥಿತಿ ಮುಂದುವರಿದರೆ ಭವಿಷ್ಯದಲ್ಲಿ ಹುಣಸೂರು ಭಾಗದಲ್ಲಿ ನೀರಿನ ದೊಡ್ಡ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ನದಿಯ ಸ್ವಚ್ಛತೆ ಕಾಪಾಡಬೇಕು. ನದಿಗೆ ಕಸ ಮತ್ತು ಮಲಿನ ನೀರು ಬಿಡುವುದನ್ನು ತಡೆಯಬೇಕು. ನದಿಗೆ ಕಸವನ್ನು ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನಿಯಮ ಉಲ್ಲಂಸುವವರಿಗೆ ದಂಡವನ್ನೂ ವಿಧಿಸಬೇಕು. ನದಿಯನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
– ಎಂ.ಅರ್ಪಿತ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…