ಓದುಗರ ಪತ್ರ
ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ. ಸಿ. ಲೇಔಟ್ನ ೮ನೇ ಕ್ರಾಸ್ ಬಳಿ ರಾಜಕಾಲುವೆ ಇದೆ. ಇದಕ್ಕೆ ಸಮೀಪದಲ್ಲಿ ಇರುವ ಕೆ. ಸಿ. ಲೇಔಟ್ ಕಡೆಯಿಂದ ಹರಿದುಬರುವ ಕೊಳಚೆ ನೀರು ಸೇರ್ಪಡೆಯಾಗುತ್ತಿದ್ದು, ದುರ್ನಾತ ಬೀರುತ್ತಿದೆ. ಹಾಗಾಗಿ ರಾಜಕಾಲುವೆ ಆಸುಪಾಸಿನಲ್ಲಿ ವಾಸಿಸುತ್ತಿರುವ ನಿವಾಸಿಗಳು ಇದರಿಂದ ಪರದಾಡುವಂತೆ ಆಗಿದೆ. ಅಲ್ಲದೆ, ಕೊಳಚೆಯಿಂದಾಗಿ ಈ ಜಾಗವು ಸೊಳ್ಳೆಗಳ ಆವಾಸ್ಥಾನವಾಗಿಬಿಟ್ಟಿದೆ. ಇದರಿಂದ ಸ್ಥಳೀಯರು ರೋಗ-ರುಜಿನಗಳು ಹರಡುವ ಭೀತಿಯಲ್ಲಿ ದಿನದೂಡುವಂತಾಗಿದೆ. ಈ ಸಮಸ್ಯೆಯನ್ನು ಜನಪ್ರತಿನಿಽಗಳು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ರಾಜಕಾಲುವೆಗೆ ಸೇರುತ್ತಿರುವ ಕೊಳಚೆ ನೀರನ್ನು ಬೇರೆ ಕಡೆಗೆ ಹರಿಯುವಂತೆ ಮಾಡಲು ಕ್ರಮವಹಿಸುವ ಮೂಲಕ ಸ್ಥಳೀಯರು ನೆಮ್ಮದಿಯಾಗಿರಲು ಅವಕಾಶ ಕಲ್ಪಿಸಿಕೊಡಬೇಕು.
-ಕಾಂತರಾಜು, ಜೆ. ಸಿ. ಲೇಔಟ್, ಮೈಸೂರು
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…