Andolana originals

ಓದುಗರ ಪತ್ರ: ಅನಗತ್ಯ ಫೋನ್ ಕರೆಗಳ ಕಿರಿಕಿರಿ ತಪ್ಪಿಸಿ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳವರು ನಿಮ್ಮ ಮಗ,ಮಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? ಹಾಗಿದ್ದರೆ ನಮ್ಮ ಕಾಲೇಜಿಗೆ, ಕಂಪ್ಯೂಟರ್ ಸೆಂಟರ್‌ಗೆ ಸೇರಿಸಿ ಎಂದು ಹೇಳುತ್ತಾರೆ.

ನಿಮಗೆ ನಮ್ಮ ಫೋನ್ ನಂಬರ್ ಕೊಟ್ಟವರು ಯಾರು ಎಂದು ಕೇಳಿದರೆ ಬೋರ್ಡ್‌ನಿಂದ ಪಡೆಯಲಾಗಿದೆ ಎಂದು ಹೇಳುತ್ತಾರೆ. ಪ್ರತಿಯೊಬ್ಬರ ಮೊಬೈಲ್ ನಂಬರ್ ಖಾಸಗಿಯಾಗಿರುತ್ತದೆ. ಪೋಷಕರ ಅನುಮತಿ ಇಲ್ಲದೇ ಪರೀಕ್ಷಾ ಮಂಡಳಿಯವರು ಹೇಗೆ ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳಿಗೆ ಮೊಬೈಲ್ ನಂಬರ್ ನೀಡುತ್ತಾರೆ? ಪೋಷಕರ ಮೊಬೈಲ್ ನಂಬರ್ ಪಡೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹಣ ಸಂದಾಯವಾಗುತ್ತದೆಯೇ ಎಂಬ ಅನುಮಾನ ಮೂಡುತ್ತದೆ.

ಸರ್ಕಾರ ಹಾಗೂ ಶಿಕ್ಷಣ ಇಲಾಖೆಯವರು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಕಂಪ್ಯೂಟರ್‌ಸೆಂಟರ್‌ಗಳಿಗೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪೋಷಕರಿಗೆ ಅನಗತ್ಯ ಕರೆಗಳಿಂದ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಬೇಕಾಗಿದೆ.

– ಮೀನಾಕ್ಷಿ, ಮೈಸೂರು

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

8 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

8 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

10 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

10 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

10 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

10 hours ago