ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್ಗಳವರು ನಿಮ್ಮ ಮಗ,ಮಗಳು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? ಹಾಗಿದ್ದರೆ ನಮ್ಮ ಕಾಲೇಜಿಗೆ, ಕಂಪ್ಯೂಟರ್ ಸೆಂಟರ್ಗೆ ಸೇರಿಸಿ ಎಂದು ಹೇಳುತ್ತಾರೆ.
ನಿಮಗೆ ನಮ್ಮ ಫೋನ್ ನಂಬರ್ ಕೊಟ್ಟವರು ಯಾರು ಎಂದು ಕೇಳಿದರೆ ಬೋರ್ಡ್ನಿಂದ ಪಡೆಯಲಾಗಿದೆ ಎಂದು ಹೇಳುತ್ತಾರೆ. ಪ್ರತಿಯೊಬ್ಬರ ಮೊಬೈಲ್ ನಂಬರ್ ಖಾಸಗಿಯಾಗಿರುತ್ತದೆ. ಪೋಷಕರ ಅನುಮತಿ ಇಲ್ಲದೇ ಪರೀಕ್ಷಾ ಮಂಡಳಿಯವರು ಹೇಗೆ ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್ಗಳಿಗೆ ಮೊಬೈಲ್ ನಂಬರ್ ನೀಡುತ್ತಾರೆ? ಪೋಷಕರ ಮೊಬೈಲ್ ನಂಬರ್ ಪಡೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹಣ ಸಂದಾಯವಾಗುತ್ತದೆಯೇ ಎಂಬ ಅನುಮಾನ ಮೂಡುತ್ತದೆ.
ಸರ್ಕಾರ ಹಾಗೂ ಶಿಕ್ಷಣ ಇಲಾಖೆಯವರು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಕಂಪ್ಯೂಟರ್ಸೆಂಟರ್ಗಳಿಗೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪೋಷಕರಿಗೆ ಅನಗತ್ಯ ಕರೆಗಳಿಂದ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಬೇಕಾಗಿದೆ.
– ಮೀನಾಕ್ಷಿ, ಮೈಸೂರು
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…