Andolana originals

ಓದುಗರ ಪತ್ರ: ಬೆಲೆ ಏರಿಕೆ ಖಂಡನೀಯ

ಸರ್ಕಾರ ಸಾರಿಗೆ, ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಮಾಡಲು ಮುಂದಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸರ್ಕಾರದ ಈ ಬೆಲೆ ಏರಿಕೆ ನೀತಿ ಹೊಸ ವರ್ಷದ ಆರಂಭದಲ್ಲಿಯೇ ಜನಸಾಮಾನ್ಯರಿಗೆ ಆತಂಕ ತಂದೊಡ್ಡಿದೆ.

ಕೆಲವು ತಿಂಗಳ ಹಿಂದೆ ಕರ್ನಾಟಕ ಹಾಲು ಮಹಾಮಂಡಳಿ ಪ್ರತಿ ಹಾಲಿನ ಪ್ಯಾಕೆಟ್ ಮೇಲೆ ಎರಡು ರೂ.ಗಳನ್ನು ಹೆಚ್ಚಿಸಿ, ಹೆಚ್ಚುವರಿ ಹಾಲನ್ನು ನೀಡಿತು. ಇದೀಗ ಮತ್ತೆ ಪ್ರತಿ ಲೀ. ಹಾಲಿನ ಮೇಲೆ ೫ ರೂ.ಗಳನ್ನು ಏರಿಸಲು ಮುಂದಾಗಿರುವುದು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದರೊಂದಿಗೆ ಬಸ್ ಪ್ರಯಾಣ ದರವನ್ನೂ ಶೇ.೧೫ರಷ್ಟು ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಇದರೊಂದಿಗೆ ಬೆಂಗಳೂರು ಮಹಾನಗರ ಪಾಲಿಕೆಯು ನೀರಿನ ದರ ಹಾಗೂ ಎಸ್ಕಾಂ ವಿದ್ಯುತ್ ದರವನ್ನು ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಇವೆಲ್ಲವನ್ನೂ ಗಮನಿಸಿದರೆ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ಬೆಲೆ ಏರಿಕೆಯ ಹಾದಿ ಹಿಡಿದಿದೆಯೇನೋ ಅನಿಸುತ್ತದೆ. ಸಾರಿಗೆ ಇಲಾಖೆಯಲ್ಲಿನ ಸಿಬ್ಬಂದಿಗೆ ವೇತನ ನೀಡುವುದಕ್ಕೂ ೨,೦೦೦ ಕೋಟಿ ರೂ.ಗಳನ್ನು ಸಾಲ ಮಾಡಿರುವ ಸರ್ಕಾರಕ್ಕೆ ಹಾಲಿನ ಪ್ರೋತ್ಸಾಹ ಧನ ನೀಡಲೂ ಹಣ ಇಲ್ಲದಂತಾಗಿದೆ. ಒಟ್ಟಾರೆ ಸರ್ಕಾರದ ಈ ಬೆಲೆ ಏರಿಕೆ ನೀತಿ ಜನಸಾಮಾನ್ಯರಿಗೆ ಹೊರೆಯಾಗಿದ್ದು, ಆಡಳಿತಾರೂಢ ಸರ್ಕಾರವನ್ನು ಪ್ರಶ್ನಿಸಬೇಕಾದ ವಿಪಕ್ಷಗಳು ನಿಶ್ಶಕ್ತವಾಗಿರುವುದು ಬೇಸರದ ಸಂಗತಿ.

ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.

 

 

 

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

12 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

12 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

12 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

12 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago