Andolana originals

ಓದುಗರ ಪತ್ರ: ಬೆಲೆ ಏರಿಕೆ ಖಂಡನೀಯ

ಸರ್ಕಾರ ಸಾರಿಗೆ, ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಮಾಡಲು ಮುಂದಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸರ್ಕಾರದ ಈ ಬೆಲೆ ಏರಿಕೆ ನೀತಿ ಹೊಸ ವರ್ಷದ ಆರಂಭದಲ್ಲಿಯೇ ಜನಸಾಮಾನ್ಯರಿಗೆ ಆತಂಕ ತಂದೊಡ್ಡಿದೆ.

ಕೆಲವು ತಿಂಗಳ ಹಿಂದೆ ಕರ್ನಾಟಕ ಹಾಲು ಮಹಾಮಂಡಳಿ ಪ್ರತಿ ಹಾಲಿನ ಪ್ಯಾಕೆಟ್ ಮೇಲೆ ಎರಡು ರೂ.ಗಳನ್ನು ಹೆಚ್ಚಿಸಿ, ಹೆಚ್ಚುವರಿ ಹಾಲನ್ನು ನೀಡಿತು. ಇದೀಗ ಮತ್ತೆ ಪ್ರತಿ ಲೀ. ಹಾಲಿನ ಮೇಲೆ ೫ ರೂ.ಗಳನ್ನು ಏರಿಸಲು ಮುಂದಾಗಿರುವುದು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದರೊಂದಿಗೆ ಬಸ್ ಪ್ರಯಾಣ ದರವನ್ನೂ ಶೇ.೧೫ರಷ್ಟು ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಇದರೊಂದಿಗೆ ಬೆಂಗಳೂರು ಮಹಾನಗರ ಪಾಲಿಕೆಯು ನೀರಿನ ದರ ಹಾಗೂ ಎಸ್ಕಾಂ ವಿದ್ಯುತ್ ದರವನ್ನು ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಇವೆಲ್ಲವನ್ನೂ ಗಮನಿಸಿದರೆ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ಬೆಲೆ ಏರಿಕೆಯ ಹಾದಿ ಹಿಡಿದಿದೆಯೇನೋ ಅನಿಸುತ್ತದೆ. ಸಾರಿಗೆ ಇಲಾಖೆಯಲ್ಲಿನ ಸಿಬ್ಬಂದಿಗೆ ವೇತನ ನೀಡುವುದಕ್ಕೂ ೨,೦೦೦ ಕೋಟಿ ರೂ.ಗಳನ್ನು ಸಾಲ ಮಾಡಿರುವ ಸರ್ಕಾರಕ್ಕೆ ಹಾಲಿನ ಪ್ರೋತ್ಸಾಹ ಧನ ನೀಡಲೂ ಹಣ ಇಲ್ಲದಂತಾಗಿದೆ. ಒಟ್ಟಾರೆ ಸರ್ಕಾರದ ಈ ಬೆಲೆ ಏರಿಕೆ ನೀತಿ ಜನಸಾಮಾನ್ಯರಿಗೆ ಹೊರೆಯಾಗಿದ್ದು, ಆಡಳಿತಾರೂಢ ಸರ್ಕಾರವನ್ನು ಪ್ರಶ್ನಿಸಬೇಕಾದ ವಿಪಕ್ಷಗಳು ನಿಶ್ಶಕ್ತವಾಗಿರುವುದು ಬೇಸರದ ಸಂಗತಿ.

ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

3 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

3 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

3 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

3 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

3 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

3 hours ago