Andolana originals

ಓದುಗರ ಪತ್ರ: ಏರುತಿಹುದು ಅಗತ್ಯ ವಸ್ತುಗಳ ಬೆಲೆಗಳು

ರಾಜ್ಯ  ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಇದೆ.  ಆಸ್ತಿ ನೋಂದಣಿ ಶುಲ್ಕ, ಛಾಪಾ ಮುದ್ರಾಂಕನ ಶುಲ್ಕ, ಮೆಟ್ರೋ ಪ್ರಯಾಣ ದರ, ಬಸ್ ಪ್ರಯಾಣ ದರ, ವಿದ್ಯುತ್, ಹಾಲು, ಮೊಸರು,  ಡೀಸೆಲ್ ದರಗಳು  ಏರಿಕೆಯಾಗಿವೆ .

ಹಾಲು ಲೀಟರಿಗೆ  ನಾಲ್ಕು ರೂಪಾಯಿ ಜಾಸ್ತಿಯಾದರೆ, ಹೋಟೆಲ್ ನವರು ಒಂದು ಕಪ್ ಕಾಫಿ, ಟೀಗೆ ಕನಿಷ  ಮೂರು ರೂಪಾಯಿ ಏರಿಸುತ್ತಾರೆ.  ಮೊಸರು ಲೀಟರಿಗೆ ನಾಲ್ಕು ರೂ. ಹೆಚ್ಚಾದರೆ,  ಹೋಟೆಲ್ ಊಟದಲ್ಲಿ ನೀಡುವ ಮೊಸರಿಗೆ ಎರಡು ರೂ.  ಜಾಸ್ತಿಯಾಗುತ್ತದೆ.

ಡೀಸೆಲ್ ದರ  ಜಾಸ್ತಿಯಾಗಿದ್ದು,  ಮತ್ತೆ  ಬಸ್ ಪ್ರಯಾಣ ದರ,   ಕ್ಯಾಬ್ ಪ್ರಯಾಣ ದರ ಹಾಗೂ ಸರಕು ಸಾಗಣೆದರಗಳೂ ಜಾಸ್ತಿಯಾಗಲಿದ್ದು,  ಪರೋಕ್ಷವಾಗಿ ಜನ ಸಾಮಾನ್ಯರ ಮೇಲೆಯೇ ದರ ಏರಿಕೆಯ ಬರೆ ಬೀಳಲಿದೆ.  ಹಿಂದೆಲ್ಲಾ  ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಳ ಮಾಡಿದ್ದೇವೆ ಎನ್ನುತ್ತಿದ್ದ ಸಚಿವರೊಬ್ಬರು ಪ್ರಸ್ತುತ ಸರ್ಕಾರ ವೈಜ್ಞಾನಿಕವಾಗಿ  ದರ  ಹೆಚ್ಚಳ ಮಾಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಗತ್ಯ ವಸ್ತುಗಳ ದರ ಏರಿಕೆಯನ್ನು ನೋಡಿದರೆ  ಕವಿ ಕಯ್ಯಾರ  ಕಯ್ಯಾರ ಕಿಞ್ಞಣ್ಣ ರೈ ರವರ ಕವನ ‘ಏರುತಿಹುದು ಹಾರುತಿಹುದು’  ಕವನ ನೆನಪಿಗೆ ಬರುತ್ತದೆ.

– ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

1 hour ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

1 hour ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

1 hour ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

1 hour ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

1 hour ago