ಓದುಗರ ಪತ್ರ
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ ಆದೇಶ ಹೊರಡಿಸಿ ಬಡರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯ.
ಮಧುಮೇಹ,ರಕ್ತದೊತ್ತಡ, ಕಣ್ಣಿನ ಸೋಂಕು ಹಾಗೂ ಹೃದ್ರೋಗ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. ಇದರ ಜೊತೆಗೆ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಗಳನ್ನು ಮಾರುವಂತಿಲ್ಲ. ಒಂದು ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಬಡ್ಡಿ ಸಮೇತ ಮರುಪಾವತಿಸಬೇಕು ಹಾಗೂ ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವುದು ಸ್ವಾಗತಾರ್ಹ.
ಈಗಾಗಲೇ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ತೆರೆದು ೧,೬೦೦ ಕ್ಕಿಂತ ಹೆಚ್ಚು ಔಷಧಗಳನ್ನು ಕಡಿಮೆ ಬೆಲೆಗೆ ನೀಡುವುದರ ಜೊತೆಗೆ, ೩೯ ಅಗತ್ಯ ಔಷಧಗಳ ಬೆಲೆ ಇಳಿಕೆ ಮಾಡಿರುವುದು ಒಳ್ಳೆಯ ಬೆಳವಣಿಗೆ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…
ದಾಸೇಗೌಡ ಸರಗೂರು ಅಸಮರ್ಪಕ ವ್ಯವಸ್ಥೆಯಿಂದ ನೀರು ಪೋಲು;ನಿರ್ವಹಣೆಯಿಲ್ಲದ ಶೌಚಾಲಯ, ಕಸದ ರಾಶಿ ತಾಂಡವ ಸರಗೂರು: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ…