ಓದುಗರ ಪತ್ರ
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ ಆದೇಶ ಹೊರಡಿಸಿ ಬಡರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯ.
ಮಧುಮೇಹ,ರಕ್ತದೊತ್ತಡ, ಕಣ್ಣಿನ ಸೋಂಕು ಹಾಗೂ ಹೃದ್ರೋಗ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. ಇದರ ಜೊತೆಗೆ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಗಳನ್ನು ಮಾರುವಂತಿಲ್ಲ. ಒಂದು ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಬಡ್ಡಿ ಸಮೇತ ಮರುಪಾವತಿಸಬೇಕು ಹಾಗೂ ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವುದು ಸ್ವಾಗತಾರ್ಹ.
ಈಗಾಗಲೇ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ತೆರೆದು ೧,೬೦೦ ಕ್ಕಿಂತ ಹೆಚ್ಚು ಔಷಧಗಳನ್ನು ಕಡಿಮೆ ಬೆಲೆಗೆ ನೀಡುವುದರ ಜೊತೆಗೆ, ೩೯ ಅಗತ್ಯ ಔಷಧಗಳ ಬೆಲೆ ಇಳಿಕೆ ಮಾಡಿರುವುದು ಒಳ್ಳೆಯ ಬೆಳವಣಿಗೆ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…