Andolana originals

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ ಆದೇಶ ಹೊರಡಿಸಿ ಬಡರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯ.

ಮಧುಮೇಹ,ರಕ್ತದೊತ್ತಡ, ಕಣ್ಣಿನ ಸೋಂಕು ಹಾಗೂ ಹೃದ್ರೋಗ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. ಇದರ ಜೊತೆಗೆ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಗಳನ್ನು ಮಾರುವಂತಿಲ್ಲ. ಒಂದು ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಬಡ್ಡಿ ಸಮೇತ ಮರುಪಾವತಿಸಬೇಕು ಹಾಗೂ ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವುದು ಸ್ವಾಗತಾರ್ಹ.

ಈಗಾಗಲೇ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ತೆರೆದು ೧,೬೦೦ ಕ್ಕಿಂತ ಹೆಚ್ಚು ಔಷಧಗಳನ್ನು ಕಡಿಮೆ ಬೆಲೆಗೆ ನೀಡುವುದರ ಜೊತೆಗೆ, ೩೯ ಅಗತ್ಯ ಔಷಧಗಳ ಬೆಲೆ ಇಳಿಕೆ ಮಾಡಿರುವುದು ಒಳ್ಳೆಯ ಬೆಳವಣಿಗೆ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

6 hours ago