Andolana originals

ಓದುಗರ ಪತ್ರ: ಪ್ರಿನ್ಸೆಸ್’ ಹೆಸರು ಬದಲಾವಣೆ ಬೇಡ

ಮೈಸೂರಿನ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಲು ಮುಂದಾಗಿರುವ ಮೈಸೂರು ಮಹಾನಗರ ಪಾಲಿಕೆಯ ನಿರ್ಧಾರ ಸೂಕ್ತವಲ್ಲ.

ಈ ರಸ್ತೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ‘ಪ್ರಿನ್ಸೆಸ್ ರಸ್ತೆ’ ಎಂದೇ ಪ್ರಸಿದ್ಧಿಯಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಸಹೋದರಿ ಕೃಷ್ಣಾಜಮ್ಮಣ್ಣಿ ಮತ್ತವರ ಮೂವರು ಹೆಣ್ಣುಮಕ್ಕಳು ಕ್ಷಯ ರೋಗಕ್ಕೆ ಬಲಿಯಾದಾಗ, ನಾಲ್ವಡಿ ಕೃಷ್ಣರಾಜ ಒಡೆಯರು ೧೦೦ ಎಕರೆ ಜಾಗ ನೀಡಿ ತಮ್ಮ ಸಹೋದರಿಯ ಹೆಸರಿನಲ್ಲಿ ದಕ್ಷಿಣ ಭಾರತದ ಮೊದಲ ಕ್ಷಯ ರೋಗ ಆಸ್ಪತ್ರೆ ‘ಪ್ರಿನ್ಸೆಸ್ ಕೃಷ್ಣಾಜಮ್ಮಣ್ಣಿ ಸ್ಯಾನಿಟೋರಿಯಂ’ ಕಟ್ಟಿಸಿದರು. ಇದಕ್ಕೆ ರಾಜಕುಮಾರಿ ಕೃಷ್ಣಾಜಮ್ಮಣ್ಣಿಯವರ ಪತಿ ಕರ್ನಲ್ ದೇಸ ರಾಜೇ ಅರಸ್ ಮತ್ತು ಕುಟುಂಬಸ್ಥರು ಎಪ್ಪತ್ತೈದು ಸಾವಿರ ರೂ.ಗಳನ್ನು ದೇಣಿಗೆ ನೀಡಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದಾರೆ.

ಇವರ ಸ್ಮರಣಾರ್ಥವಾಗಿ ಕೆಆರ್‌ಎಸ್‌ಗೆ ತೆರಳುವ ರಸ್ತೆಗೆ ಕೃಷ್ಣಾಜಮ್ಮಣ್ಣಿಯವರ ಹೆಸರಿಡಲಾಗಿದೆ. ಆದರೆ ಮಹಾನಗರ ಪಾಲಿಕೆ ಈ ಮಾರ್ಗಕ್ಕೆ ಈಗ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಮರುನಾಮಕರಣ ಮಾಡಲು ಮುಂದಾಗಿರುವುದು ಮೈಸೂರಿನ ಇತಿಹಾಸ ಮತ್ತು ಪರಂಪರೆಗೆ ಧಕ್ಕೆಯುಂಟು ಮಾಡಲಿದೆ. ಅಲ್ಲದೆ ಪ್ರಿನ್ಸೆಸ್ ರಸ್ತೆಯ ಹೆಸರು ಬದಲಿಸಿದರೆ ಅದು ಮೈಸೂರಿನ ಜನತೆಯ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತದೆ. ಆದ್ದರಿಂದ ಮಹಾನಗರ ಪಾಲಿಕೆಯವರು ಪಾರಂಪರಿಕ ನಗರವನ್ನು ಪಾರಂಪರಿಕವಾಗಿಯೇ ಉಳಿಸಿಕೊಂಡು ಹೊಸ ಬಡಾವಣೆಯ ರಸ್ತೆಗಳಿಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಲಿ.

-ಲಕ್ಷಿ  ಕಿಶೋರ್ ಅರಸ್, ಜಯಲಕ್ಷಿ  ಪುರಂ, ಮೈಸೂರು.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

13 mins ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

21 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

25 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

1 hour ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

1 hour ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 hour ago