Andolana originals

ಓದುಗರ ಪತ್ರ: ಪ್ರಿನ್ಸೆಸ್’ ಹೆಸರು ಬದಲಾವಣೆ ಬೇಡ

ಮೈಸೂರಿನ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಲು ಮುಂದಾಗಿರುವ ಮೈಸೂರು ಮಹಾನಗರ ಪಾಲಿಕೆಯ ನಿರ್ಧಾರ ಸೂಕ್ತವಲ್ಲ.

ಈ ರಸ್ತೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ‘ಪ್ರಿನ್ಸೆಸ್ ರಸ್ತೆ’ ಎಂದೇ ಪ್ರಸಿದ್ಧಿಯಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಸಹೋದರಿ ಕೃಷ್ಣಾಜಮ್ಮಣ್ಣಿ ಮತ್ತವರ ಮೂವರು ಹೆಣ್ಣುಮಕ್ಕಳು ಕ್ಷಯ ರೋಗಕ್ಕೆ ಬಲಿಯಾದಾಗ, ನಾಲ್ವಡಿ ಕೃಷ್ಣರಾಜ ಒಡೆಯರು ೧೦೦ ಎಕರೆ ಜಾಗ ನೀಡಿ ತಮ್ಮ ಸಹೋದರಿಯ ಹೆಸರಿನಲ್ಲಿ ದಕ್ಷಿಣ ಭಾರತದ ಮೊದಲ ಕ್ಷಯ ರೋಗ ಆಸ್ಪತ್ರೆ ‘ಪ್ರಿನ್ಸೆಸ್ ಕೃಷ್ಣಾಜಮ್ಮಣ್ಣಿ ಸ್ಯಾನಿಟೋರಿಯಂ’ ಕಟ್ಟಿಸಿದರು. ಇದಕ್ಕೆ ರಾಜಕುಮಾರಿ ಕೃಷ್ಣಾಜಮ್ಮಣ್ಣಿಯವರ ಪತಿ ಕರ್ನಲ್ ದೇಸ ರಾಜೇ ಅರಸ್ ಮತ್ತು ಕುಟುಂಬಸ್ಥರು ಎಪ್ಪತ್ತೈದು ಸಾವಿರ ರೂ.ಗಳನ್ನು ದೇಣಿಗೆ ನೀಡಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದಾರೆ.

ಇವರ ಸ್ಮರಣಾರ್ಥವಾಗಿ ಕೆಆರ್‌ಎಸ್‌ಗೆ ತೆರಳುವ ರಸ್ತೆಗೆ ಕೃಷ್ಣಾಜಮ್ಮಣ್ಣಿಯವರ ಹೆಸರಿಡಲಾಗಿದೆ. ಆದರೆ ಮಹಾನಗರ ಪಾಲಿಕೆ ಈ ಮಾರ್ಗಕ್ಕೆ ಈಗ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಮರುನಾಮಕರಣ ಮಾಡಲು ಮುಂದಾಗಿರುವುದು ಮೈಸೂರಿನ ಇತಿಹಾಸ ಮತ್ತು ಪರಂಪರೆಗೆ ಧಕ್ಕೆಯುಂಟು ಮಾಡಲಿದೆ. ಅಲ್ಲದೆ ಪ್ರಿನ್ಸೆಸ್ ರಸ್ತೆಯ ಹೆಸರು ಬದಲಿಸಿದರೆ ಅದು ಮೈಸೂರಿನ ಜನತೆಯ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತದೆ. ಆದ್ದರಿಂದ ಮಹಾನಗರ ಪಾಲಿಕೆಯವರು ಪಾರಂಪರಿಕ ನಗರವನ್ನು ಪಾರಂಪರಿಕವಾಗಿಯೇ ಉಳಿಸಿಕೊಂಡು ಹೊಸ ಬಡಾವಣೆಯ ರಸ್ತೆಗಳಿಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಲಿ.

-ಲಕ್ಷಿ  ಕಿಶೋರ್ ಅರಸ್, ಜಯಲಕ್ಷಿ  ಪುರಂ, ಮೈಸೂರು.

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

11 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

12 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

13 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

13 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

14 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

15 hours ago