Andolana originals

ಓದುಗರ ಪತ್ರ: ಪ್ರಿನ್ಸೆಸ್’ ಹೆಸರು ಬದಲಾವಣೆ ಬೇಡ

ಮೈಸೂರಿನ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಲು ಮುಂದಾಗಿರುವ ಮೈಸೂರು ಮಹಾನಗರ ಪಾಲಿಕೆಯ ನಿರ್ಧಾರ ಸೂಕ್ತವಲ್ಲ.

ಈ ರಸ್ತೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ‘ಪ್ರಿನ್ಸೆಸ್ ರಸ್ತೆ’ ಎಂದೇ ಪ್ರಸಿದ್ಧಿಯಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಸಹೋದರಿ ಕೃಷ್ಣಾಜಮ್ಮಣ್ಣಿ ಮತ್ತವರ ಮೂವರು ಹೆಣ್ಣುಮಕ್ಕಳು ಕ್ಷಯ ರೋಗಕ್ಕೆ ಬಲಿಯಾದಾಗ, ನಾಲ್ವಡಿ ಕೃಷ್ಣರಾಜ ಒಡೆಯರು ೧೦೦ ಎಕರೆ ಜಾಗ ನೀಡಿ ತಮ್ಮ ಸಹೋದರಿಯ ಹೆಸರಿನಲ್ಲಿ ದಕ್ಷಿಣ ಭಾರತದ ಮೊದಲ ಕ್ಷಯ ರೋಗ ಆಸ್ಪತ್ರೆ ‘ಪ್ರಿನ್ಸೆಸ್ ಕೃಷ್ಣಾಜಮ್ಮಣ್ಣಿ ಸ್ಯಾನಿಟೋರಿಯಂ’ ಕಟ್ಟಿಸಿದರು. ಇದಕ್ಕೆ ರಾಜಕುಮಾರಿ ಕೃಷ್ಣಾಜಮ್ಮಣ್ಣಿಯವರ ಪತಿ ಕರ್ನಲ್ ದೇಸ ರಾಜೇ ಅರಸ್ ಮತ್ತು ಕುಟುಂಬಸ್ಥರು ಎಪ್ಪತ್ತೈದು ಸಾವಿರ ರೂ.ಗಳನ್ನು ದೇಣಿಗೆ ನೀಡಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದಾರೆ.

ಇವರ ಸ್ಮರಣಾರ್ಥವಾಗಿ ಕೆಆರ್‌ಎಸ್‌ಗೆ ತೆರಳುವ ರಸ್ತೆಗೆ ಕೃಷ್ಣಾಜಮ್ಮಣ್ಣಿಯವರ ಹೆಸರಿಡಲಾಗಿದೆ. ಆದರೆ ಮಹಾನಗರ ಪಾಲಿಕೆ ಈ ಮಾರ್ಗಕ್ಕೆ ಈಗ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಮರುನಾಮಕರಣ ಮಾಡಲು ಮುಂದಾಗಿರುವುದು ಮೈಸೂರಿನ ಇತಿಹಾಸ ಮತ್ತು ಪರಂಪರೆಗೆ ಧಕ್ಕೆಯುಂಟು ಮಾಡಲಿದೆ. ಅಲ್ಲದೆ ಪ್ರಿನ್ಸೆಸ್ ರಸ್ತೆಯ ಹೆಸರು ಬದಲಿಸಿದರೆ ಅದು ಮೈಸೂರಿನ ಜನತೆಯ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತದೆ. ಆದ್ದರಿಂದ ಮಹಾನಗರ ಪಾಲಿಕೆಯವರು ಪಾರಂಪರಿಕ ನಗರವನ್ನು ಪಾರಂಪರಿಕವಾಗಿಯೇ ಉಳಿಸಿಕೊಂಡು ಹೊಸ ಬಡಾವಣೆಯ ರಸ್ತೆಗಳಿಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಲಿ.

-ಲಕ್ಷಿ  ಕಿಶೋರ್ ಅರಸ್, ಜಯಲಕ್ಷಿ  ಪುರಂ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

6 hours ago