ಓದುಗರ ಪತ್ರ
ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್ಗಳನ್ನು ವಿತರಣೆ ಮಾಡಿದ್ದರು. ಪಾಸ್ಗಳನ್ನು ಪಡೆದಿದ್ದರೂ ಜಗ ಇಲ್ಲ ಬೇರೆ ಕಡೆ ಹೋಗಿ ಎಂದು ಹೇಳಿ ಪೊಲೀಸರು ಕಳುಹಿಸಿದ್ದರು ಎಂಬ ವಿಷಯ ತಿಳಿದ್ದದ್ದೆ. ಇಂತಹ ಘಟನೆಗಳನ್ನು ನೋಡಿದವರ ಮನಸ್ಸಿಗೆ ನೋವಾಗಿತ್ತು, ಆದರೆ ಪಾಸ್ ಪಡೆದವರಿಗೆ ಇನ್ನೇಷ್ಟು ನೋವಿವಾಗಿರುವುದಿಲ್ಲ? ದುಡ್ಡು ಕೊಟ್ಟು ಪಾಸ್ ಪಡೆದಿದ್ದರೂ ದಸರಾ ನೋಡದೆ ಹಿಂತಿರುಗಿದ ಅನೇಕರು ಅಧಿಕಾರಿಗಳ ವರ್ತನೆಗೆ ಬೇಸರಪಟ್ಟುಕೊಂಡಿದ್ದಾರೆ ಎಂದು ಹೇಳಬೇಕಾಗಿಲ್ಲ.
ಈ ಬಾರಿಯಾದರೂ ದಸರಾ ಮತ್ತು ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಬರುವವರಿಗೆ ಎಷ್ಟು ಆಸನದ ವ್ಯವಸ್ಥೆ ಇರುತ್ತದೇಯೋ ಅಷ್ಟೇ ಪಾಸ್ಗಳನ್ನು ವಿತರಣೆ ಮಾಡುವುದು ಮೈಸೂರು ಜಿಡಳಿತದ ಕರ್ತವ್ಯವಾಗಬೇಕಿದೆ. ಪಾಸ್ ಪಡೆದು ದಸರಾ ಕಾರ್ಯಕ್ರಮಗಳನ್ನು ನೋಡಲು ಅವಕಾಶ ಸಿಗದೆ ವಂಚಿತರಾದರೆ ಅವರ ಹಣವನ್ನು ಹಿಂತಿರುಗಿಸುವ ವ್ಯವಸ್ಥೆಯನ್ನಾದರೂ ಮಾಡಬೇಕು. ಇದು ಕಷ್ಟದ ಕೆಲಸವೆಂಬುದು ಗೊತ್ತು. ಹಾಗಾಗಿ ದುಡ್ಡುಕೊಟ್ಟು ಪಾಸ್ ಪಡೆದವರ ಹಿತ ಕಾಯುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ.
-ನಾಗೇಶ್, ಮೈಸೂರು
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ…
ಫುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ…
ಬಿಡದಿ ಟೌನ್ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ…
ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಕಲೇಶಪುರ ರೈಲು ಮಾರ್ಗದಲ್ಲಿ ಶೀಘ್ರವೇ ವಂದೇ ಭಾರತ್ ಪ್ರಯಾಣಿಕರ ರೈಲು ಸಂಚಾರ ಆರಂಭಿಸಲು…
ಕುಸುಮ ಆಯರಹಳ್ಳಿ ಈ ಊರ ಹಳೇ ಹೆಸರೇನೇಳಿ? ಮಹಿಷ ಮಂಡಲ, ಮಯಿಸನಾಡು, ಮೈಸಾಪುರ... ಆ ಮೈಸಾಪುರವೇ ನಂತರ ಮೈಸೂರು ಆಯ್ತು…