ಓದುಗರ ಪತ್ರ
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸೆಂಟ್ರಿಂಗ್ ಮತ್ತಿತರ ಕಾರ್ಯ ಗಳಿಗಾಗಿ ಕಬ್ಬಿಣದ ಸರಳುಗಳನ್ನು ಕಟ್ಟಿ ಅಣಿಗೊಳಿಸುವವರು (ಬಾರ್ ಬೆಂಡರ್), ಮರಗೆಲಸ, ಟೈಲ್ಸ್ ಅಳವಡಿಸುವುದು ಮೊದಲಾದ ವೃತ್ತಗಳಲ್ಲಿ ತೊಡಗಿರುವ ಕಾರ್ಮಿಕರು ಉದ್ಯೋಗದ ಸ್ಥಳದಲ್ಲಿ ಆಕಸ್ಮಿಕವಾಗಿ ಮೃತಪಟ್ಟರೆ ಹಾಗೂ ಅಂಗವಿಕಲರಾದರೆ ಅವರಿಗೆ ಜೀವನಕ್ಕೆ ಭದ್ರತೆಯಿಲ್ಲದೇ ಅವರ ಕುಟುಂಬದವರು ಬೀದಿ ಪಾಲಾಗಬೇಕಾಗುತ್ತದೆ.
ಕಾರ್ಪೊರೇಟ್ ಕಂಪೆನಿಗಳ ಮಾದರಿಯಲ್ಲಿ ಅವರಿಗೆ ವಾರದ ರಜೆ, ಪಿಎ-, ಇಎಸ್ಐ ಮೊದಲಾದ ಯಾವುದೇ ಸೌಲಭ್ಯವಿರುವುದಿಲ್ಲ. ಕೆಲಸಕ್ಕೆ ಬಂದ ದಿನ ಮಾತ್ರ ಕೂಲಿ ಹಣ ಸಂದಾಯವಾಗುತ್ತದೆ. ಅನಾರೋಗ್ಯದಿಂದ ಅಥವಾ ಅನಿವಾರ್ಯ ಕಾರಣದಿಂದ ಕೆಲಸಕ್ಕೆ ಹೋಗದಿದ್ದರೆ ಅಂದಿನ ಕೂಲಿ ಸಿಗುವುದಿಲ್ಲ. ನೂರಾರು ಜನರಿಗೆ ಮನೆ ನಿರ್ಮಿಸಿಕೊಡುವ ಇವರಿಗೆ ಸ್ವಂತ ಮನೆಯೂ ಇರುವುದಿಲ್ಲ. ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್ಗಳನ್ನು ವಿತರಿಸಲಾಗುತ್ತಿದ್ದು, ಕೆಲವು ಸೌಲಭ್ಯಗಳನ್ನು ಕಲ್ಪಿಸಿದ್ದರೂ ಮಾಹಿತಿಯ ಕೊರತೆಯಿಂದ ಬಹುತೇಕ ಕಾರ್ಮಿಕರು ಲೇಬರ್ ಕಾರ್ಡ್ಗಳನ್ನು ಪಡೆದಿರುವುದಿಲ್ಲ.
ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಕೂಡಲೇ ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ ಸ್ಥಳದಲ್ಲಿ ಭದ್ರತೆ ಒದಗಿಸಬೇಕು ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಆಕಸ್ಮಿಕವಾಗಿ ಕಾರ್ಮಿಕರು ಮೃತಪಟ್ಟರೆ ಅಥವಾ ಅಂಗವಿಕಲರಾದರೆ ಅವರ ಕುಟುಂಬದವರಿಗೆ ಸೂಕ್ತ ಆರ್ಥಿಕ ನೆರವು, ಪಿಂಚಣಿ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಿದರೆ ಮೇ ೧ರಂದು ಆಚರಿಸಲಾಗುವ ಕಾರ್ಮಿಕ ದಿನಾಚರಣೆಗೆ ಅರ್ಥ ಬರುತ್ತದೆ.
-ಅಹಲ್ಯ ಸಿ.ನಾ. ಚಂದ್ರ, ಜನತಾ ನಗರ, ಮೈಸೂರು
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…