Andolana originals

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸೆಂಟ್ರಿಂಗ್ ಮತ್ತಿತರ ಕಾರ್ಯ ಗಳಿಗಾಗಿ ಕಬ್ಬಿಣದ ಸರಳುಗಳನ್ನು ಕಟ್ಟಿ ಅಣಿಗೊಳಿಸುವವರು (ಬಾರ್ ಬೆಂಡರ್), ಮರಗೆಲಸ, ಟೈಲ್ಸ್ ಅಳವಡಿಸುವುದು ಮೊದಲಾದ ವೃತ್ತಗಳಲ್ಲಿ ತೊಡಗಿರುವ ಕಾರ್ಮಿಕರು ಉದ್ಯೋಗದ ಸ್ಥಳದಲ್ಲಿ ಆಕಸ್ಮಿಕವಾಗಿ ಮೃತಪಟ್ಟರೆ ಹಾಗೂ ಅಂಗವಿಕಲರಾದರೆ ಅವರಿಗೆ ಜೀವನಕ್ಕೆ ಭದ್ರತೆಯಿಲ್ಲದೇ ಅವರ ಕುಟುಂಬದವರು ಬೀದಿ ಪಾಲಾಗಬೇಕಾಗುತ್ತದೆ.

ಕಾರ್ಪೊರೇಟ್ ಕಂಪೆನಿಗಳ ಮಾದರಿಯಲ್ಲಿ ಅವರಿಗೆ ವಾರದ ರಜೆ, ಪಿಎ-, ಇಎಸ್‌ಐ ಮೊದಲಾದ ಯಾವುದೇ ಸೌಲಭ್ಯವಿರುವುದಿಲ್ಲ. ಕೆಲಸಕ್ಕೆ ಬಂದ ದಿನ ಮಾತ್ರ ಕೂಲಿ ಹಣ ಸಂದಾಯವಾಗುತ್ತದೆ. ಅನಾರೋಗ್ಯದಿಂದ ಅಥವಾ ಅನಿವಾರ್ಯ ಕಾರಣದಿಂದ ಕೆಲಸಕ್ಕೆ ಹೋಗದಿದ್ದರೆ ಅಂದಿನ ಕೂಲಿ ಸಿಗುವುದಿಲ್ಲ. ನೂರಾರು ಜನರಿಗೆ ಮನೆ ನಿರ್ಮಿಸಿಕೊಡುವ ಇವರಿಗೆ ಸ್ವಂತ ಮನೆಯೂ ಇರುವುದಿಲ್ಲ. ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದ್ದು, ಕೆಲವು ಸೌಲಭ್ಯಗಳನ್ನು ಕಲ್ಪಿಸಿದ್ದರೂ ಮಾಹಿತಿಯ ಕೊರತೆಯಿಂದ ಬಹುತೇಕ ಕಾರ್ಮಿಕರು ಲೇಬರ್ ಕಾರ್ಡ್ಗಳನ್ನು ಪಡೆದಿರುವುದಿಲ್ಲ.

ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಕೂಡಲೇ ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ ಸ್ಥಳದಲ್ಲಿ ಭದ್ರತೆ ಒದಗಿಸಬೇಕು ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಆಕಸ್ಮಿಕವಾಗಿ ಕಾರ್ಮಿಕರು ಮೃತಪಟ್ಟರೆ ಅಥವಾ ಅಂಗವಿಕಲರಾದರೆ ಅವರ ಕುಟುಂಬದವರಿಗೆ ಸೂಕ್ತ ಆರ್ಥಿಕ ನೆರವು, ಪಿಂಚಣಿ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಿದರೆ ಮೇ ೧ರಂದು ಆಚರಿಸಲಾಗುವ ಕಾರ್ಮಿಕ ದಿನಾಚರಣೆಗೆ ಅರ್ಥ ಬರುತ್ತದೆ.

 -ಅಹಲ್ಯ ಸಿ.ನಾ. ಚಂದ್ರ, ಜನತಾ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

3 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

4 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

5 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

13 hours ago