Andolana originals

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸೆಂಟ್ರಿಂಗ್ ಮತ್ತಿತರ ಕಾರ್ಯ ಗಳಿಗಾಗಿ ಕಬ್ಬಿಣದ ಸರಳುಗಳನ್ನು ಕಟ್ಟಿ ಅಣಿಗೊಳಿಸುವವರು (ಬಾರ್ ಬೆಂಡರ್), ಮರಗೆಲಸ, ಟೈಲ್ಸ್ ಅಳವಡಿಸುವುದು ಮೊದಲಾದ ವೃತ್ತಗಳಲ್ಲಿ ತೊಡಗಿರುವ ಕಾರ್ಮಿಕರು ಉದ್ಯೋಗದ ಸ್ಥಳದಲ್ಲಿ ಆಕಸ್ಮಿಕವಾಗಿ ಮೃತಪಟ್ಟರೆ ಹಾಗೂ ಅಂಗವಿಕಲರಾದರೆ ಅವರಿಗೆ ಜೀವನಕ್ಕೆ ಭದ್ರತೆಯಿಲ್ಲದೇ ಅವರ ಕುಟುಂಬದವರು ಬೀದಿ ಪಾಲಾಗಬೇಕಾಗುತ್ತದೆ.

ಕಾರ್ಪೊರೇಟ್ ಕಂಪೆನಿಗಳ ಮಾದರಿಯಲ್ಲಿ ಅವರಿಗೆ ವಾರದ ರಜೆ, ಪಿಎ-, ಇಎಸ್‌ಐ ಮೊದಲಾದ ಯಾವುದೇ ಸೌಲಭ್ಯವಿರುವುದಿಲ್ಲ. ಕೆಲಸಕ್ಕೆ ಬಂದ ದಿನ ಮಾತ್ರ ಕೂಲಿ ಹಣ ಸಂದಾಯವಾಗುತ್ತದೆ. ಅನಾರೋಗ್ಯದಿಂದ ಅಥವಾ ಅನಿವಾರ್ಯ ಕಾರಣದಿಂದ ಕೆಲಸಕ್ಕೆ ಹೋಗದಿದ್ದರೆ ಅಂದಿನ ಕೂಲಿ ಸಿಗುವುದಿಲ್ಲ. ನೂರಾರು ಜನರಿಗೆ ಮನೆ ನಿರ್ಮಿಸಿಕೊಡುವ ಇವರಿಗೆ ಸ್ವಂತ ಮನೆಯೂ ಇರುವುದಿಲ್ಲ. ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದ್ದು, ಕೆಲವು ಸೌಲಭ್ಯಗಳನ್ನು ಕಲ್ಪಿಸಿದ್ದರೂ ಮಾಹಿತಿಯ ಕೊರತೆಯಿಂದ ಬಹುತೇಕ ಕಾರ್ಮಿಕರು ಲೇಬರ್ ಕಾರ್ಡ್ಗಳನ್ನು ಪಡೆದಿರುವುದಿಲ್ಲ.

ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಕೂಡಲೇ ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ ಸ್ಥಳದಲ್ಲಿ ಭದ್ರತೆ ಒದಗಿಸಬೇಕು ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಆಕಸ್ಮಿಕವಾಗಿ ಕಾರ್ಮಿಕರು ಮೃತಪಟ್ಟರೆ ಅಥವಾ ಅಂಗವಿಕಲರಾದರೆ ಅವರ ಕುಟುಂಬದವರಿಗೆ ಸೂಕ್ತ ಆರ್ಥಿಕ ನೆರವು, ಪಿಂಚಣಿ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಿದರೆ ಮೇ ೧ರಂದು ಆಚರಿಸಲಾಗುವ ಕಾರ್ಮಿಕ ದಿನಾಚರಣೆಗೆ ಅರ್ಥ ಬರುತ್ತದೆ.

 -ಅಹಲ್ಯ ಸಿ.ನಾ. ಚಂದ್ರ, ಜನತಾ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago