ಓದುಗರ ಪತ್ರ
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಿ ಈ ದೇಶಕ್ಕೆ ಹೊಸ ಸಂವಿಧಾನವನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂಬ ಸುದ್ದಿ ಹರಡುತ್ತಿದೆ.
ಸರ್ವಧರ್ಮ ಸಮನ್ವಯತೆ ಹಾಗೂ ವಿವಿಧ ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಒಂದು ಧರ್ಮವನ್ನು ಮಾತ್ರ ಮುನ್ನೆಲೆಗೆ ತಂದು ಈ ದೇಶಕ್ಕೆ ಹೊಸ ಸಂವಿಧಾನ ನೀಡಲು ಖಂಡಿತ ಸಾಧ್ಯವಿಲ್ಲ.
ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನಸ್ಸುಗಳು ಎಂದಿಗೂ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ವನ್ನು ಒಪ್ಪುವುದಿಲ್ಲ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ.
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನುವಾದಿಗಳ ಮನಸ್ಥಿತಿಯನ್ನು ನೋಡಿದರೆ ಅವರು ಭಾರತವನ್ನು ಮತ್ತೇ ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೇನೋ ಅನಿಸುತ್ತದೆ. ಆ ಮೂಲಕ ಮೇಲ್ವರ್ಗ, ಕೆಳವರ್ಗವೆಂಬ ತಾರತಮ್ಯವನ್ನು ಮತ್ತೇ ಸೃಷ್ಟಿಸಿ, ದಲಿತ ಸಮುದಾಯಗಳು ಹಾಗೂ ಮಹಿಳೆಯರ ಮೇಲಿನ ಶೋಷಣೆಗಳು, ಅನಿಷ್ಟ ಪದ್ಧತಿಗಳಾದ ಸತಿ ಸಹಗಮನ ಮತ್ತು ದೇವದಾಸಿ ಪದ್ಧತಿಗಳು ಮರುಜೀವ ಪಡೆಯುವಂತೆ ಮಾಡುವ ಹುನ್ನಾರ ಸೃಷ್ಟಿಸಿದ್ದಾರೆ ಎಂಬ ಆತಂಕ ಶುರುವಾಗಿದೆ. ಮನುವಾದಿಗಳು ಸಂವಿಧಾನದ ಬಗ್ಗೆ ಅಸಮಾಧಾನವನ್ನು ಹೊಂದಿರುವುದು ಮುಂದಿನ ಪೀಳಿಗೆ ಸಮಾನತೆಯ ಸೂರಿನಡಿ ಉಸಿರಾಡುತ್ತದೆ ಎಂಬ ಭಾವನೆ ದೂರಾಗುವಂತೆ ಮಾಡಿದೆ. ಆದ್ದರಿಂದ ಭಾರತೀಯರೆಲ್ಲ ಒಗ್ಗೂಡಿ ಸಂವಿಧಾನದ ರಕ್ಷಣೆಗೆ ಮುಂದಾಗಬೇಕಿದೆ.
-ಪಿ.ರಾಜು ಅಶೋಕಪುರಂ, ಸಂಚಾಲಕರು, ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಮೈಸೂರು.
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…