ಓದುಗರ ಪತ್ರ
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಿ ಈ ದೇಶಕ್ಕೆ ಹೊಸ ಸಂವಿಧಾನವನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂಬ ಸುದ್ದಿ ಹರಡುತ್ತಿದೆ.
ಸರ್ವಧರ್ಮ ಸಮನ್ವಯತೆ ಹಾಗೂ ವಿವಿಧ ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಒಂದು ಧರ್ಮವನ್ನು ಮಾತ್ರ ಮುನ್ನೆಲೆಗೆ ತಂದು ಈ ದೇಶಕ್ಕೆ ಹೊಸ ಸಂವಿಧಾನ ನೀಡಲು ಖಂಡಿತ ಸಾಧ್ಯವಿಲ್ಲ.
ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನಸ್ಸುಗಳು ಎಂದಿಗೂ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ವನ್ನು ಒಪ್ಪುವುದಿಲ್ಲ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ.
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನುವಾದಿಗಳ ಮನಸ್ಥಿತಿಯನ್ನು ನೋಡಿದರೆ ಅವರು ಭಾರತವನ್ನು ಮತ್ತೇ ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೇನೋ ಅನಿಸುತ್ತದೆ. ಆ ಮೂಲಕ ಮೇಲ್ವರ್ಗ, ಕೆಳವರ್ಗವೆಂಬ ತಾರತಮ್ಯವನ್ನು ಮತ್ತೇ ಸೃಷ್ಟಿಸಿ, ದಲಿತ ಸಮುದಾಯಗಳು ಹಾಗೂ ಮಹಿಳೆಯರ ಮೇಲಿನ ಶೋಷಣೆಗಳು, ಅನಿಷ್ಟ ಪದ್ಧತಿಗಳಾದ ಸತಿ ಸಹಗಮನ ಮತ್ತು ದೇವದಾಸಿ ಪದ್ಧತಿಗಳು ಮರುಜೀವ ಪಡೆಯುವಂತೆ ಮಾಡುವ ಹುನ್ನಾರ ಸೃಷ್ಟಿಸಿದ್ದಾರೆ ಎಂಬ ಆತಂಕ ಶುರುವಾಗಿದೆ. ಮನುವಾದಿಗಳು ಸಂವಿಧಾನದ ಬಗ್ಗೆ ಅಸಮಾಧಾನವನ್ನು ಹೊಂದಿರುವುದು ಮುಂದಿನ ಪೀಳಿಗೆ ಸಮಾನತೆಯ ಸೂರಿನಡಿ ಉಸಿರಾಡುತ್ತದೆ ಎಂಬ ಭಾವನೆ ದೂರಾಗುವಂತೆ ಮಾಡಿದೆ. ಆದ್ದರಿಂದ ಭಾರತೀಯರೆಲ್ಲ ಒಗ್ಗೂಡಿ ಸಂವಿಧಾನದ ರಕ್ಷಣೆಗೆ ಮುಂದಾಗಬೇಕಿದೆ.
-ಪಿ.ರಾಜು ಅಶೋಕಪುರಂ, ಸಂಚಾಲಕರು, ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಮೈಸೂರು.
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…