ಓದುಗರ ಪತ್ರ
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಿ ಈ ದೇಶಕ್ಕೆ ಹೊಸ ಸಂವಿಧಾನವನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂಬ ಸುದ್ದಿ ಹರಡುತ್ತಿದೆ.
ಸರ್ವಧರ್ಮ ಸಮನ್ವಯತೆ ಹಾಗೂ ವಿವಿಧ ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಒಂದು ಧರ್ಮವನ್ನು ಮಾತ್ರ ಮುನ್ನೆಲೆಗೆ ತಂದು ಈ ದೇಶಕ್ಕೆ ಹೊಸ ಸಂವಿಧಾನ ನೀಡಲು ಖಂಡಿತ ಸಾಧ್ಯವಿಲ್ಲ.
ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನಸ್ಸುಗಳು ಎಂದಿಗೂ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ವನ್ನು ಒಪ್ಪುವುದಿಲ್ಲ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ.
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನುವಾದಿಗಳ ಮನಸ್ಥಿತಿಯನ್ನು ನೋಡಿದರೆ ಅವರು ಭಾರತವನ್ನು ಮತ್ತೇ ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೇನೋ ಅನಿಸುತ್ತದೆ. ಆ ಮೂಲಕ ಮೇಲ್ವರ್ಗ, ಕೆಳವರ್ಗವೆಂಬ ತಾರತಮ್ಯವನ್ನು ಮತ್ತೇ ಸೃಷ್ಟಿಸಿ, ದಲಿತ ಸಮುದಾಯಗಳು ಹಾಗೂ ಮಹಿಳೆಯರ ಮೇಲಿನ ಶೋಷಣೆಗಳು, ಅನಿಷ್ಟ ಪದ್ಧತಿಗಳಾದ ಸತಿ ಸಹಗಮನ ಮತ್ತು ದೇವದಾಸಿ ಪದ್ಧತಿಗಳು ಮರುಜೀವ ಪಡೆಯುವಂತೆ ಮಾಡುವ ಹುನ್ನಾರ ಸೃಷ್ಟಿಸಿದ್ದಾರೆ ಎಂಬ ಆತಂಕ ಶುರುವಾಗಿದೆ. ಮನುವಾದಿಗಳು ಸಂವಿಧಾನದ ಬಗ್ಗೆ ಅಸಮಾಧಾನವನ್ನು ಹೊಂದಿರುವುದು ಮುಂದಿನ ಪೀಳಿಗೆ ಸಮಾನತೆಯ ಸೂರಿನಡಿ ಉಸಿರಾಡುತ್ತದೆ ಎಂಬ ಭಾವನೆ ದೂರಾಗುವಂತೆ ಮಾಡಿದೆ. ಆದ್ದರಿಂದ ಭಾರತೀಯರೆಲ್ಲ ಒಗ್ಗೂಡಿ ಸಂವಿಧಾನದ ರಕ್ಷಣೆಗೆ ಮುಂದಾಗಬೇಕಿದೆ.
-ಪಿ.ರಾಜು ಅಶೋಕಪುರಂ, ಸಂಚಾಲಕರು, ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಮೈಸೂರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…