Andolana originals

ಓದುಗರ ಪತ್ರ: ಸಂವಿಧಾನ ರಕ್ಷಣೆ ಅನಿವಾರ್ಯ

ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಿ ಈ ದೇಶಕ್ಕೆ ಹೊಸ ಸಂವಿಧಾನವನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂಬ ಸುದ್ದಿ ಹರಡುತ್ತಿದೆ.

ಸರ್ವಧರ್ಮ ಸಮನ್ವಯತೆ ಹಾಗೂ ವಿವಿಧ ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಒಂದು ಧರ್ಮವನ್ನು ಮಾತ್ರ ಮುನ್ನೆಲೆಗೆ ತಂದು ಈ ದೇಶಕ್ಕೆ ಹೊಸ ಸಂವಿಧಾನ ನೀಡಲು ಖಂಡಿತ ಸಾಧ್ಯವಿಲ್ಲ.

ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನಸ್ಸುಗಳು ಎಂದಿಗೂ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ವನ್ನು ಒಪ್ಪುವುದಿಲ್ಲ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ.

ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನುವಾದಿಗಳ ಮನಸ್ಥಿತಿಯನ್ನು ನೋಡಿದರೆ ಅವರು ಭಾರತವನ್ನು ಮತ್ತೇ ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೇನೋ ಅನಿಸುತ್ತದೆ. ಆ ಮೂಲಕ ಮೇಲ್ವರ್ಗ, ಕೆಳವರ್ಗವೆಂಬ ತಾರತಮ್ಯವನ್ನು ಮತ್ತೇ ಸೃಷ್ಟಿಸಿ, ದಲಿತ ಸಮುದಾಯಗಳು ಹಾಗೂ ಮಹಿಳೆಯರ ಮೇಲಿನ ಶೋಷಣೆಗಳು, ಅನಿಷ್ಟ ಪದ್ಧತಿಗಳಾದ ಸತಿ ಸಹಗಮನ ಮತ್ತು ದೇವದಾಸಿ ಪದ್ಧತಿಗಳು ಮರುಜೀವ ಪಡೆಯುವಂತೆ ಮಾಡುವ ಹುನ್ನಾರ ಸೃಷ್ಟಿಸಿದ್ದಾರೆ ಎಂಬ ಆತಂಕ ಶುರುವಾಗಿದೆ. ಮನುವಾದಿಗಳು ಸಂವಿಧಾನದ ಬಗ್ಗೆ ಅಸಮಾಧಾನವನ್ನು ಹೊಂದಿರುವುದು ಮುಂದಿನ ಪೀಳಿಗೆ ಸಮಾನತೆಯ ಸೂರಿನಡಿ ಉಸಿರಾಡುತ್ತದೆ ಎಂಬ ಭಾವನೆ ದೂರಾಗುವಂತೆ ಮಾಡಿದೆ. ಆದ್ದರಿಂದ ಭಾರತೀಯರೆಲ್ಲ ಒಗ್ಗೂಡಿ ಸಂವಿಧಾನದ ರಕ್ಷಣೆಗೆ ಮುಂದಾಗಬೇಕಿದೆ.

-ಪಿ.ರಾಜು ಅಶೋಕಪುರಂ, ಸಂಚಾಲಕರು, ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

3 hours ago