ಓದುಗರ ಪತ್ರ
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಿ ಈ ದೇಶಕ್ಕೆ ಹೊಸ ಸಂವಿಧಾನವನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂಬ ಸುದ್ದಿ ಹರಡುತ್ತಿದೆ.
ಸರ್ವಧರ್ಮ ಸಮನ್ವಯತೆ ಹಾಗೂ ವಿವಿಧ ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಒಂದು ಧರ್ಮವನ್ನು ಮಾತ್ರ ಮುನ್ನೆಲೆಗೆ ತಂದು ಈ ದೇಶಕ್ಕೆ ಹೊಸ ಸಂವಿಧಾನ ನೀಡಲು ಖಂಡಿತ ಸಾಧ್ಯವಿಲ್ಲ.
ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನಸ್ಸುಗಳು ಎಂದಿಗೂ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ವನ್ನು ಒಪ್ಪುವುದಿಲ್ಲ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ.
ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಬೇಕು ಎಂದುಕೊಂಡಿರುವ ಮನುವಾದಿಗಳ ಮನಸ್ಥಿತಿಯನ್ನು ನೋಡಿದರೆ ಅವರು ಭಾರತವನ್ನು ಮತ್ತೇ ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೇನೋ ಅನಿಸುತ್ತದೆ. ಆ ಮೂಲಕ ಮೇಲ್ವರ್ಗ, ಕೆಳವರ್ಗವೆಂಬ ತಾರತಮ್ಯವನ್ನು ಮತ್ತೇ ಸೃಷ್ಟಿಸಿ, ದಲಿತ ಸಮುದಾಯಗಳು ಹಾಗೂ ಮಹಿಳೆಯರ ಮೇಲಿನ ಶೋಷಣೆಗಳು, ಅನಿಷ್ಟ ಪದ್ಧತಿಗಳಾದ ಸತಿ ಸಹಗಮನ ಮತ್ತು ದೇವದಾಸಿ ಪದ್ಧತಿಗಳು ಮರುಜೀವ ಪಡೆಯುವಂತೆ ಮಾಡುವ ಹುನ್ನಾರ ಸೃಷ್ಟಿಸಿದ್ದಾರೆ ಎಂಬ ಆತಂಕ ಶುರುವಾಗಿದೆ. ಮನುವಾದಿಗಳು ಸಂವಿಧಾನದ ಬಗ್ಗೆ ಅಸಮಾಧಾನವನ್ನು ಹೊಂದಿರುವುದು ಮುಂದಿನ ಪೀಳಿಗೆ ಸಮಾನತೆಯ ಸೂರಿನಡಿ ಉಸಿರಾಡುತ್ತದೆ ಎಂಬ ಭಾವನೆ ದೂರಾಗುವಂತೆ ಮಾಡಿದೆ. ಆದ್ದರಿಂದ ಭಾರತೀಯರೆಲ್ಲ ಒಗ್ಗೂಡಿ ಸಂವಿಧಾನದ ರಕ್ಷಣೆಗೆ ಮುಂದಾಗಬೇಕಿದೆ.
-ಪಿ.ರಾಜು ಅಶೋಕಪುರಂ, ಸಂಚಾಲಕರು, ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಮೈಸೂರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…