Andolana originals

ಓದುಗರ ಪತ್ರ: ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ.

ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸಿದ ಬಳಿಕ ಗ್ಯಾರಂಟಿ ಯೋಜನೆ ಗಳಿಗಾಗಿ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ, ಬಸ್ ಟಿಕೆಟ್ ದರ ವನ್ನೂ ಏರಿಕೆ ಮಾಡಿದೆ. ಇದರಿಂದಾಗಿ ಪುರುಷ ಪ್ರಯಾಣಿಕರು ದಂಡ ತೆರುವಂತಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ೩ ಬಾರಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿರುವ ಜತೆಗೆ ಗ್ರಾಮೀಣ ಭಾಗಗಳಿಗೆ ಬಸ್‌ಗಳ ಸಂಖ್ಯೆಯನ್ನೂ ಕಡಿಮೆ ಮಾಡಿದೆ. ಇದಲ್ಲದೆ ಶಕ್ತಿ ಯೋಜನೆ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಹ ಪ್ರಯಾಣಿಕರಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದಂತಾಗಿದೆ.

ಮುಖ್ಯವಾಗಿ ಗ್ರಾಮೀಣ ಭಾಗಗಳಿಗೆ ಬಸ್‌ಗಳ ಸಂಖ್ಯೆ ಕಡಿಮೆಯಾಗಿದ್ದು, ಮೈಸೂರಿನ ಸುತ್ತಮುತ್ತಲಿನ ಹಳ್ಳಿಗಳಿಗೆ ನಿಗದಿತ ಸಮಯಕ್ಕೆ ಬಸ್ ಬಾರದೆ, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಹಿರಿಯ ನಾಗರಿಕರು ಪರದಾಡುವಂತಾಗಿದೆ.

ಅಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜು ಮತ್ತು ಕೆಲಸಕ್ಕೆ ತೆರಳುವುದಕ್ಕೆ ಸಾಧ್ಯ ವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಬಸ್ ಟಿಕೆಟ್ ದರ ಏರಿಸುವ ಕಡೆಯೇ ಹೆಚ್ಚು ಗಮನ ನೀಡದೆ, ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕಿದೆ.

-ಎಂ.ಚೈತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

ಆಂದೋಲನ ಡೆಸ್ಕ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

9 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

9 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

12 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

12 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

13 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

13 hours ago