ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ.
ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸಿದ ಬಳಿಕ ಗ್ಯಾರಂಟಿ ಯೋಜನೆ ಗಳಿಗಾಗಿ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ, ಬಸ್ ಟಿಕೆಟ್ ದರ ವನ್ನೂ ಏರಿಕೆ ಮಾಡಿದೆ. ಇದರಿಂದಾಗಿ ಪುರುಷ ಪ್ರಯಾಣಿಕರು ದಂಡ ತೆರುವಂತಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ೩ ಬಾರಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿರುವ ಜತೆಗೆ ಗ್ರಾಮೀಣ ಭಾಗಗಳಿಗೆ ಬಸ್ಗಳ ಸಂಖ್ಯೆಯನ್ನೂ ಕಡಿಮೆ ಮಾಡಿದೆ. ಇದಲ್ಲದೆ ಶಕ್ತಿ ಯೋಜನೆ ಬಳಿಕ ಸರ್ಕಾರಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಹ ಪ್ರಯಾಣಿಕರಿಗೆ ಬಸ್ನಲ್ಲಿ ಸ್ಥಳಾವಕಾಶವೇ ಇಲ್ಲದಂತಾಗಿದೆ.
ಮುಖ್ಯವಾಗಿ ಗ್ರಾಮೀಣ ಭಾಗಗಳಿಗೆ ಬಸ್ಗಳ ಸಂಖ್ಯೆ ಕಡಿಮೆಯಾಗಿದ್ದು, ಮೈಸೂರಿನ ಸುತ್ತಮುತ್ತಲಿನ ಹಳ್ಳಿಗಳಿಗೆ ನಿಗದಿತ ಸಮಯಕ್ಕೆ ಬಸ್ ಬಾರದೆ, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಹಿರಿಯ ನಾಗರಿಕರು ಪರದಾಡುವಂತಾಗಿದೆ.
ಅಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜು ಮತ್ತು ಕೆಲಸಕ್ಕೆ ತೆರಳುವುದಕ್ಕೆ ಸಾಧ್ಯ ವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಬಸ್ ಟಿಕೆಟ್ ದರ ಏರಿಸುವ ಕಡೆಯೇ ಹೆಚ್ಚು ಗಮನ ನೀಡದೆ, ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕಿದೆ.
-ಎಂ.ಚೈತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮಹಾರಾಜ ಕಾಲೇಜು, ಮೈಸೂರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…