Andolana originals

ಓದುಗರ ಪತ್ರ: ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ.

ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸಿದ ಬಳಿಕ ಗ್ಯಾರಂಟಿ ಯೋಜನೆ ಗಳಿಗಾಗಿ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ, ಬಸ್ ಟಿಕೆಟ್ ದರ ವನ್ನೂ ಏರಿಕೆ ಮಾಡಿದೆ. ಇದರಿಂದಾಗಿ ಪುರುಷ ಪ್ರಯಾಣಿಕರು ದಂಡ ತೆರುವಂತಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ೩ ಬಾರಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿರುವ ಜತೆಗೆ ಗ್ರಾಮೀಣ ಭಾಗಗಳಿಗೆ ಬಸ್‌ಗಳ ಸಂಖ್ಯೆಯನ್ನೂ ಕಡಿಮೆ ಮಾಡಿದೆ. ಇದಲ್ಲದೆ ಶಕ್ತಿ ಯೋಜನೆ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಹ ಪ್ರಯಾಣಿಕರಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದಂತಾಗಿದೆ.

ಮುಖ್ಯವಾಗಿ ಗ್ರಾಮೀಣ ಭಾಗಗಳಿಗೆ ಬಸ್‌ಗಳ ಸಂಖ್ಯೆ ಕಡಿಮೆಯಾಗಿದ್ದು, ಮೈಸೂರಿನ ಸುತ್ತಮುತ್ತಲಿನ ಹಳ್ಳಿಗಳಿಗೆ ನಿಗದಿತ ಸಮಯಕ್ಕೆ ಬಸ್ ಬಾರದೆ, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಹಿರಿಯ ನಾಗರಿಕರು ಪರದಾಡುವಂತಾಗಿದೆ.

ಅಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜು ಮತ್ತು ಕೆಲಸಕ್ಕೆ ತೆರಳುವುದಕ್ಕೆ ಸಾಧ್ಯ ವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಬಸ್ ಟಿಕೆಟ್ ದರ ಏರಿಸುವ ಕಡೆಯೇ ಹೆಚ್ಚು ಗಮನ ನೀಡದೆ, ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕಿದೆ.

-ಎಂ.ಚೈತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago