ಓದುಗರ ಪತ್ರ
ಪ್ರತಿನಿತ್ಯ ನಂಜನಗೂಡು – ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ ಸುವುದೇ ದುಸ್ತರವಾಗಿದೆ.
ಸಂಜೆ ಕೆಲಸ ಮುಗಿಸಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣಿಸುವವರ ಪಾಡು ಹೇಳತೀರದಾಗಿದೆ. ಹುಲ್ಲಹಳ್ಳಿ ಸರ್ಕಲ್ನಲ್ಲಿ ಸಂಜೆ ೪ ರಿಂದ ರಾತ್ರಿ ೮ ಗಂಟೆಯತನಕ ನೂರಾರು ಜನರು ಬಸ್ಗಾಗಿ ಕಾಯುತ್ತಾರೆ. ಮೈಸೂರಿನಿಂದ ಗುಂಡ್ಲುಪೇಟೆಗೆ ಸಂಚರಿಸುವ ಎಕ್ಸ್ಪ್ರೆಸ್ ಬಸ್ಗಳು ನಂಜನಗೂಡಿನಲ್ಲಿ ನಿಲ್ಲಿಸುವುದಿಲ್ಲ. ಈ ಸಮಯದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದು ಪ್ರಯಾಣಿಕರ ಪರದಾಟಕ್ಕೆ ಕಾರಣವಾಗಿದೆ.
ಕೆಲವು ಬಸ್ಗಳಲ್ಲಿ ನಿಲ್ಲಲು ಜಾಗವಿಲ್ಲದಿದ್ದರೂ ಕೆಲವರು ಬಸ್ ಹತ್ತಲು ಹೋಗಿ ಕೆಳಗೆ ಬಿದ್ದು ಗಾಯಗೊಂಡಿರುವ ಅನೇಕ ಉದಾಹರಣೆಗಳಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಜೆ ವೇಳೆಯಲ್ಲಿ ಈ ಮಾರ್ಗದಲ್ಲಿ ಹೆಚ್ಚಿನ ಬಸ್ಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕು.
-ಪವನ್, ಗುಂಡ್ಲುಪೇಟೆ
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…