ಓದುಗರ ಪತ್ರ
ಪ್ರತಿನಿತ್ಯ ನಂಜನಗೂಡು – ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ ಸುವುದೇ ದುಸ್ತರವಾಗಿದೆ.
ಸಂಜೆ ಕೆಲಸ ಮುಗಿಸಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣಿಸುವವರ ಪಾಡು ಹೇಳತೀರದಾಗಿದೆ. ಹುಲ್ಲಹಳ್ಳಿ ಸರ್ಕಲ್ನಲ್ಲಿ ಸಂಜೆ ೪ ರಿಂದ ರಾತ್ರಿ ೮ ಗಂಟೆಯತನಕ ನೂರಾರು ಜನರು ಬಸ್ಗಾಗಿ ಕಾಯುತ್ತಾರೆ. ಮೈಸೂರಿನಿಂದ ಗುಂಡ್ಲುಪೇಟೆಗೆ ಸಂಚರಿಸುವ ಎಕ್ಸ್ಪ್ರೆಸ್ ಬಸ್ಗಳು ನಂಜನಗೂಡಿನಲ್ಲಿ ನಿಲ್ಲಿಸುವುದಿಲ್ಲ. ಈ ಸಮಯದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದು ಪ್ರಯಾಣಿಕರ ಪರದಾಟಕ್ಕೆ ಕಾರಣವಾಗಿದೆ.
ಕೆಲವು ಬಸ್ಗಳಲ್ಲಿ ನಿಲ್ಲಲು ಜಾಗವಿಲ್ಲದಿದ್ದರೂ ಕೆಲವರು ಬಸ್ ಹತ್ತಲು ಹೋಗಿ ಕೆಳಗೆ ಬಿದ್ದು ಗಾಯಗೊಂಡಿರುವ ಅನೇಕ ಉದಾಹರಣೆಗಳಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಜೆ ವೇಳೆಯಲ್ಲಿ ಈ ಮಾರ್ಗದಲ್ಲಿ ಹೆಚ್ಚಿನ ಬಸ್ಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕು.
-ಪವನ್, ಗುಂಡ್ಲುಪೇಟೆ
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…