ಓದುಗರ ಪತ್ರ
ಪ್ರತಿನಿತ್ಯ ನಂಜನಗೂಡು – ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ ಸುವುದೇ ದುಸ್ತರವಾಗಿದೆ.
ಸಂಜೆ ಕೆಲಸ ಮುಗಿಸಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣಿಸುವವರ ಪಾಡು ಹೇಳತೀರದಾಗಿದೆ. ಹುಲ್ಲಹಳ್ಳಿ ಸರ್ಕಲ್ನಲ್ಲಿ ಸಂಜೆ ೪ ರಿಂದ ರಾತ್ರಿ ೮ ಗಂಟೆಯತನಕ ನೂರಾರು ಜನರು ಬಸ್ಗಾಗಿ ಕಾಯುತ್ತಾರೆ. ಮೈಸೂರಿನಿಂದ ಗುಂಡ್ಲುಪೇಟೆಗೆ ಸಂಚರಿಸುವ ಎಕ್ಸ್ಪ್ರೆಸ್ ಬಸ್ಗಳು ನಂಜನಗೂಡಿನಲ್ಲಿ ನಿಲ್ಲಿಸುವುದಿಲ್ಲ. ಈ ಸಮಯದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದು ಪ್ರಯಾಣಿಕರ ಪರದಾಟಕ್ಕೆ ಕಾರಣವಾಗಿದೆ.
ಕೆಲವು ಬಸ್ಗಳಲ್ಲಿ ನಿಲ್ಲಲು ಜಾಗವಿಲ್ಲದಿದ್ದರೂ ಕೆಲವರು ಬಸ್ ಹತ್ತಲು ಹೋಗಿ ಕೆಳಗೆ ಬಿದ್ದು ಗಾಯಗೊಂಡಿರುವ ಅನೇಕ ಉದಾಹರಣೆಗಳಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಜೆ ವೇಳೆಯಲ್ಲಿ ಈ ಮಾರ್ಗದಲ್ಲಿ ಹೆಚ್ಚಿನ ಬಸ್ಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕು.
-ಪವನ್, ಗುಂಡ್ಲುಪೇಟೆ
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…