ಫುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ ವ್ಯವಸ್ಥೆ ಕಲ್ಪಿಸುವುದು ಸ್ಥಳೀಯ ಆಡಳಿತದ ಕರ್ತವ್ಯ. ಇಲ್ಲಿ ಮಾನವೀಯತೆಯೂ ಇರಬೇಕಾಗುತ್ತದೆ.
ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಫುಟ್ ಪಾತ್ ವ್ಯಾಪಾರಿಗಳ ತೆರವು ಕಾರ್ಯಾಚರಣೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಇತ್ತೀಚೆಗೆ ಮೈಸೂರಿನಲ್ಲಿ ಇದು ನಡೆಯುತ್ತಿದೆ. ಪಾದಚಾರಿಗಳ ಹಿತದೃಷ್ಟಿಯಿಂದ ಈ ಕಾರ್ಯಸ್ತುತ್ಯಾರ್ಹ. ಇದು ಕೇವಲ ಬೆಂಗಳೂರು, ಮೈಸೂರಿನ ಸಮಸ್ಯೆಯಲ್ಲ. ರಾಜ್ಯದ ನಾನಾ ಕಡೆ ಫುಟ್ಪಾತ್ ವ್ಯಾಪಾರಿಗಳನ್ನು ಕಾಣಬಹುದಾಗಿದೆ. ಈ ಸಮಸ್ಯೆ ಮರುಕಳಿಸಬಾರದೆಂದರೆ ಫುಟ್ಪಾತ್ ವ್ಯಾಪಾರಿಗಳಿಗೆ ಸೂಕ್ತ ಕಡೆ ಶಾಶ್ವತ ವ್ಯವಸ್ಥೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಸ್ವಲ್ಪ ದಿನಗಳ ನಂತರ ಮತ್ತೆ ಹಿಂದಿನ ಜಾಗದಲ್ಲೇ ವ್ಯಾಪಾರ ಚಟುವಟಿಕೆ ನಡೆಯುವುದನ್ನು ಕಾಣಬಹುದು. ಹಾಗಾಗಿ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪಾದಚಾರಿಗಳ ರಸ್ತೆ ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಹಾಗೆಯೇ ಫುಟ್ಪಾತ್ ವ್ಯಾಪಾರಿಗಳು ನೆಮ್ಮದಿಯ ಜೀವನ ನಡೆಸುವಂತಾಗಬೇಕು.
-ಎ.ಎಸ್.ಗೋಪಾಲಕೃಷ್ಣ, ಮೈಸೂರು
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ…
ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್ಗಳನ್ನು ವಿತರಣೆ…
ಬಿಡದಿ ಟೌನ್ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ…
ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಕಲೇಶಪುರ ರೈಲು ಮಾರ್ಗದಲ್ಲಿ ಶೀಘ್ರವೇ ವಂದೇ ಭಾರತ್ ಪ್ರಯಾಣಿಕರ ರೈಲು ಸಂಚಾರ ಆರಂಭಿಸಲು…
ಕುಸುಮ ಆಯರಹಳ್ಳಿ ಈ ಊರ ಹಳೇ ಹೆಸರೇನೇಳಿ? ಮಹಿಷ ಮಂಡಲ, ಮಯಿಸನಾಡು, ಮೈಸಾಪುರ... ಆ ಮೈಸಾಪುರವೇ ನಂತರ ಮೈಸೂರು ಆಯ್ತು…