ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ ಸಮಯದಲ್ಲಿ, ಬೀದಿ ಬದಿ ವ್ಯಾಪಾರಿಗಳ ಬದುಕಿಗೂ ತೊಂದರೆಯಾಗಬಾರದು. ಅವರು ಜೀವನ ನಡೆಸಲು ಪರ್ಯಾಯ ಜಾಗವನ್ನು ಕಲ್ಪಿಸಿ, ಒತ್ತುವರಿ ತೆರವುಗೊಳಿಸಲು ಸ್ವಲ್ಪ ಕಾಲಾವಕಾಶ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು



