ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಪುರುಷರು, ಮಹಿಳೆಯರು ಬರುತ್ತಾರೆ. ಈ ಗ್ರಂಥಾಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ.
ಶೌಚಾಲಯ ಇದ್ದರೂ ಸ್ವಚ್ಛತೆ ಇಲ್ಲದೆ ದುರ್ವಾಸನೆ ಬೀರುತ್ತಿದ್ದು, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ತೊಂದರೆಯಾಗುತ್ತಿದೆ. ಗ್ರಂಥಾಲಯದ ಮುಂಭಾಗದಲ್ಲಿ ಸ್ವಚ್ಛತೆ, ಮೈದಾನವು ಸಮತಟ್ಟಿಲ್ಲದೆ ಮಣ್ಣಿನ ಗುಡ್ಡೆಗಳ ಮೇಲೆ ಕಳೆ ಬೆಳೆದು ನಿಂತಿದ್ದು, ಸಂಜೆಯಾದರೆ ವಿದ್ಯುತ್ ದೀಪಗಳಿಲ್ಲದೆ ಕತ್ತಲಾವರಿಸುವುದರೊಂದಿಗೆ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತಿದೆ. ಇಲ್ಲಿ ಗ್ರಂಥಾಲಯವಿದೆ ಎಂದು ಬಹುತೇಕರಿಗೆ ತಿಳಿಯುವುದೇ ಇಲ್ಲ. ಶಾಸಕರು ಹಾಗೂ ಅಧಿಕಾರಿಗಳು ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಂಡು ಗ್ರಂಥಾಲಯದ ಬಳಿ ಫಲಕವನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…