ಓದುಗರ ಪತ್ರ
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೂ ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಪರಿಣಾಮ ಬೀರುತ್ತಿದೆ. ವಿದ್ಯಾರ್ಥಿ ನಿಲಯದ ಕಿಟಕಿ ಗ್ಲಾಸ್ ಒಡೆದು ಹೋಗಿವೆ. ಬಾಗಿಲುಗಳು ಹಾಳಾಗಿವೆ. ಅಲ್ಲದೇ ಕೊಠಡಿಗಳಲ್ಲಿ ಫ್ಯಾನ್ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕಂಪ್ಯೂಟರ್ ವ್ಯವಸ್ಥೆಯಿಲ್ಲ. ಹಾಗೂ ವೈಫೈ ಸೌಲಭ್ಯವು ಇಲ್ಲ.
ಈ ಹಿಂದೆ ಹಲವು ಸೌಲಭ್ಯಗಳನ್ನು ನೀಡಲಾಗಿದ್ದು, ಕೆಲವು ವರ್ಷಗಳಿಂದ ಈ ಯಾವುದೇ ವ್ಯವಸ್ಥೆಗಳು ಸಮರ್ಪಕವಾಗಿಲ್ಲ. ನಿಲಯದ ಸುತ್ತಲು ಕಸದ ರಾಶಿಯಿದ್ದು , ತೆರವುಗೊಳಿಸಿಲ್ಲ. ಅಲ್ಲದೆ ರಾತ್ರಿ ವೇಳೆಯಲ್ಲಿ ನಿಲಯಕ್ಕೆ ಓಡಾಡಲು ಸರಿಯಾದ ರಸ್ತೆ ವ್ಯವಸ್ಥೆ ಹಾಗೂ ಬೀದಿ ದೀಪದ ವ್ಯವಸ್ಥೆಗಳು ಇಲ್ಲವಾದ್ದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಚ್.ಮುಂತಾಹಿರ್, ದ್ವಿತೀಯ ಎಂ.ಎ., ಪತ್ರಿಕೋದ್ಯಮ ಮೈಸೂರು ವಿಶ್ವವಿದ್ಯಾನಿಲಯ
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…